Mysore
29
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ವಿಷ್ಣು ಸಮಾಧಿ ತೆರವು ಖಂಡಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ

vishnuvardhana

ಮೈಸೂರು : ಪೌರಕಾರ್ಮಿಕರ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಡಾ.ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು, ವಿಷ್ಣು ಪರ ಘೋಷಣೆ ಕೂಗಿದರು.

ಬಳಿಕ ಮಾತನಾಡಿದ ಮಾಜಿನಗರ ಪಾಲಿಕಾ ಸದಸ್ಯ ಎಂ.ಡಿ ಪಾರ್ಥಸಾರಥಿ, ಡಾ.ವಿಷ್ಣುವರ್ಧನ್ ಸಮಾಧಿಯ ಜಾಗವನ್ನು ಕೆಲವರು ತಮ್ಮ ಭೂಮಿ ಎಂದು ಹೇಳಿಕೊಂಡು, ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ. ಸರ್ಕಾರ ಈ ಕೂಡಲೇ ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ನಂತರದಲ್ಲಿ ಮಾತನಾಡಿದ ಪೌರಕಾರ್ಮಿಕ ಮಹದೇವ್, ವಿಷ್ಣುವರ್ಧನ್ ಅವರ ಪುಣ್ಯಭೂಮಿ ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು. ಇಲ್ಲವಾದಲ್ಲಿ ಸ್ವಚ್ಛತಾ ಕೆಲಸವನ್ನು ಬಿಟ್ಟು ಉಗ್ರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್, ಗೋಪಾಲ್, ಪಳನಿ, ಎಂ.ಪಿ ಮುರುಗೇಶ್, ಮಹದೇವ, ವಿಜಯ್ ಹಾಗೂ ಇನ್ನಿತರ ಪೌರಕಾರ್ಮಿಕರು ಹಾಜರಿದ್ದರು.

Tags:
error: Content is protected !!