ಮೈಸೂರು ನಗರ

ವಿಷ್ಣು ಸಮಾಧಿ ತೆರವು ಖಂಡಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ

ಮೈಸೂರು : ಪೌರಕಾರ್ಮಿಕರ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಡಾ.ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು, ವಿಷ್ಣು ಪರ ಘೋಷಣೆ ಕೂಗಿದರು.

ಬಳಿಕ ಮಾತನಾಡಿದ ಮಾಜಿನಗರ ಪಾಲಿಕಾ ಸದಸ್ಯ ಎಂ.ಡಿ ಪಾರ್ಥಸಾರಥಿ, ಡಾ.ವಿಷ್ಣುವರ್ಧನ್ ಸಮಾಧಿಯ ಜಾಗವನ್ನು ಕೆಲವರು ತಮ್ಮ ಭೂಮಿ ಎಂದು ಹೇಳಿಕೊಂಡು, ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ. ಸರ್ಕಾರ ಈ ಕೂಡಲೇ ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ನಂತರದಲ್ಲಿ ಮಾತನಾಡಿದ ಪೌರಕಾರ್ಮಿಕ ಮಹದೇವ್, ವಿಷ್ಣುವರ್ಧನ್ ಅವರ ಪುಣ್ಯಭೂಮಿ ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು. ಇಲ್ಲವಾದಲ್ಲಿ ಸ್ವಚ್ಛತಾ ಕೆಲಸವನ್ನು ಬಿಟ್ಟು ಉಗ್ರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್, ಗೋಪಾಲ್, ಪಳನಿ, ಎಂ.ಪಿ ಮುರುಗೇಶ್, ಮಹದೇವ, ವಿಜಯ್ ಹಾಗೂ ಇನ್ನಿತರ ಪೌರಕಾರ್ಮಿಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

41 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

58 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

1 hour ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago