vishnuvardhana
ಮೈಸೂರು : ಪೌರಕಾರ್ಮಿಕರ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಡಾ.ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು, ವಿಷ್ಣು ಪರ ಘೋಷಣೆ ಕೂಗಿದರು.
ಬಳಿಕ ಮಾತನಾಡಿದ ಮಾಜಿನಗರ ಪಾಲಿಕಾ ಸದಸ್ಯ ಎಂ.ಡಿ ಪಾರ್ಥಸಾರಥಿ, ಡಾ.ವಿಷ್ಣುವರ್ಧನ್ ಸಮಾಧಿಯ ಜಾಗವನ್ನು ಕೆಲವರು ತಮ್ಮ ಭೂಮಿ ಎಂದು ಹೇಳಿಕೊಂಡು, ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ. ಸರ್ಕಾರ ಈ ಕೂಡಲೇ ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ನಂತರದಲ್ಲಿ ಮಾತನಾಡಿದ ಪೌರಕಾರ್ಮಿಕ ಮಹದೇವ್, ವಿಷ್ಣುವರ್ಧನ್ ಅವರ ಪುಣ್ಯಭೂಮಿ ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು. ಇಲ್ಲವಾದಲ್ಲಿ ಸ್ವಚ್ಛತಾ ಕೆಲಸವನ್ನು ಬಿಟ್ಟು ಉಗ್ರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್, ಗೋಪಾಲ್, ಪಳನಿ, ಎಂ.ಪಿ ಮುರುಗೇಶ್, ಮಹದೇವ, ವಿಜಯ್ ಹಾಗೂ ಇನ್ನಿತರ ಪೌರಕಾರ್ಮಿಕರು ಹಾಜರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…