ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿದಿದೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ವಿಆರ್ಡಬ್ಲ್ಯೂ, ಯುಆರ್ಡಬ್ಲ್ಯೂ ಮತ್ತು ಎಂಆರ್ಡಬ್ಲ್ಯೂ ಕಾರ್ಯಕರ್ತರು, ಕನಿಷ್ಠ ವೇತನ ಜಾರಿ ಇಲ್ಲನೇ ನೌಕರಿ ಖಾಯಂಗೆ ಒತ್ತಾಯಿಸಿದ್ದಾರೆ.
ವಿಕಲಚೇತನ ಕಾರ್ಯಕರ್ತರು ರಾಜ್ಯದಾದ್ಯಂತ ಗ್ರಾಮೀಣ, ಪಟ್ಟಣ, ನಗರ ಪ್ರದೇಶಗಳಲ್ಲಿ ಹಿರಿಯ ನಾಗರೀಕರಿಗೆ ಸರ್ಕಾರಿ ಸೇವಾ ಮತ್ತು ಸವಲತ್ತುಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ವಿಕಲಚೇತನರು, ಮಾಸಿಕ ವೇತನ ಕೇವಲ 9 ಸಾವಿರಕ್ಕೆ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ನಮ್ಮನ್ನ ಕನಿಷ್ಠ ವೇತನಕ್ಕೆ ಸೇರ್ಪಡೆ ಮಾಡಬೇಕು.ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಬಂದಿದ್ದೇವೆ. ಸಿಎಂ ಮತ್ತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಒತ್ತಾಯಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.





