ಮೈಸೂರು ನಗರ

ಮೈಸೂರು| ಹದಗೆಟ್ಟಿರುವ ರಸ್ತೆ, ಮ್ಯಾನ್‌ಹೋಲ್‌ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮೈಸೂರಿನಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಿಂದ ಅಪಘಾತ ಸಂಭವಿಸುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳಿಂದ ಸಮಸ್ಯೆ ಉಂಟಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿ ಪಡಿಸಬೇಕು. ಜೊತೆಗೆ ಒಳಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago