ಮೈಸೂರು ನಗರ

ಶಾಸಕ ಜಿಟಿ ದೇವೇಗೌಡ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ ಮಾಡಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಾಜಿ ಮಹಾಪೌರ ಪುರುಷೋತ್ತಮ್, ಸಹಕಾರ ಕ್ಷೇತ್ರ ಯಾವ ಉದ್ದೇಶದಿಂದ ಸ್ಥಾಪನೆ ಆಗಿದೆ ಎಂದು ಜಿ.ಟಿ.ದೇವೇಗೌಡ ಅವರು ಇನ್ನೂ ಅರ್ಥ ಮಾಡಿಕೊಂಡಿಲ್ಲ. ಅದು ಒಂದು ವರ್ಗಕ್ಕೆ ಸೀಮಿತ ಅಲ್ಲ. ಪ್ರತೀ ಬಡವನಿಗೂ ಅವಕಾಶ ಸಿಗಬೇಕು. ಆದರೆ, ೪೫ ವರ್ಷ ನಿರಂತರ ಎಲ್ಲಾ ಸವಲತ್ತುಗಳನ್ನು ಜಿ.ಟಿ.ದೇವೇಗೌಡ ಪಡೆದಿದ್ದಾರೆ. ಪ್ರತೀ ವಿಚಾರವನ್ನು ತಾನೇ ಮನದಟ್ಟು ಮಾಡಿಕೊಂಡು ಸಹಕಾರ ಕ್ಷೇತ್ರದ ಅರಿವು ಬೇರೆ ಯಾರಿಗೂ ಇರಬಾರದು ಎಂದುಕೊಂಡಿದ್ದಾರೆ. ಅವರು ಯಾವ ವಿವಿಯಲ್ಲಿ ಪ್ರೊಫೆಸರ್ ಆಗಿದ್ದರು. ಅವರೇನು ಆರ್ಥಿಕ ತಜ್ಞರೇ? ಸಹಕಾರ ಕಾಯ್ದೆ ನಿಮ್ಮ ಪರಿಮಿತಿಯಲ್ಲಿ ಮಾತ್ರ ಇರಬೇಕಾ?, ಅದು ಎಲ್ಲರಿಗೂ ವಿಸ್ತಾರ ಆಗಬೇಕು ಎಂದರು.

ಸದನದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಎನ್ನುವ ಬದಲು ಸಹಕಾರ ವಲಯಕ್ಕೆ ಮೀಸಲಾತಿ ಕೊಟ್ಟರೆ ಹಾಳಾಗುತ್ತದೆ ಎನ್ನುತ್ತೀರಿ ಎಂದರೆ ನಿಮ್ಮ ಕೊಳಕು ಮನಸ್ಸು, ಸ್ವಾರ್ಥ ಹೇಗಿದೆ ಎಂದು ಗೊತ್ತಾಗುತ್ತದೆ. ದಲಿತರ, ಹಿಂದುಳಿದ ವರ್ಗದವರ ವೋಟು, ಅಽಕಾರ ಪಡೆದು, ನ್ಯಾಯ ಬಿಟ್ಟು ಅನ್ಯಾಯದ ಮಾತುಗಳನ್ನು ಆಡಿದ್ದೀರಿ. ನಿಮ್ಮ ಮೇಲೆ ಕಾನೂನು ಚೌಕಟ್ಟಿನಲ್ಲಿ ಕೇಸ್ ದಾಖಲು ಮಾಡಬೇಕು. ನೀವು ರಾಜೀನಾಮೆ ಕೊಡುವವರೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರ ಪಾಲಿಕೆ ಮಾಜಿ ಸದಸ್ಯೆ ಪಲ್ಲವಿ ಬೇಗಂ, ಸುನಿಲ್, ವಿಶ್ವ, ಆಟೋ ಪುಟ್ಟ, ದೇವನೂರು ಪುಟ್ಟನಂಜಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

36 mins ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

40 mins ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

1 hour ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

2 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

3 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

4 hours ago