ಮೈಸೂರು ನಗರ

ಶಾಸಕ ಜಿಟಿ ದೇವೇಗೌಡ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ ಮಾಡಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಾಜಿ ಮಹಾಪೌರ ಪುರುಷೋತ್ತಮ್, ಸಹಕಾರ ಕ್ಷೇತ್ರ ಯಾವ ಉದ್ದೇಶದಿಂದ ಸ್ಥಾಪನೆ ಆಗಿದೆ ಎಂದು ಜಿ.ಟಿ.ದೇವೇಗೌಡ ಅವರು ಇನ್ನೂ ಅರ್ಥ ಮಾಡಿಕೊಂಡಿಲ್ಲ. ಅದು ಒಂದು ವರ್ಗಕ್ಕೆ ಸೀಮಿತ ಅಲ್ಲ. ಪ್ರತೀ ಬಡವನಿಗೂ ಅವಕಾಶ ಸಿಗಬೇಕು. ಆದರೆ, ೪೫ ವರ್ಷ ನಿರಂತರ ಎಲ್ಲಾ ಸವಲತ್ತುಗಳನ್ನು ಜಿ.ಟಿ.ದೇವೇಗೌಡ ಪಡೆದಿದ್ದಾರೆ. ಪ್ರತೀ ವಿಚಾರವನ್ನು ತಾನೇ ಮನದಟ್ಟು ಮಾಡಿಕೊಂಡು ಸಹಕಾರ ಕ್ಷೇತ್ರದ ಅರಿವು ಬೇರೆ ಯಾರಿಗೂ ಇರಬಾರದು ಎಂದುಕೊಂಡಿದ್ದಾರೆ. ಅವರು ಯಾವ ವಿವಿಯಲ್ಲಿ ಪ್ರೊಫೆಸರ್ ಆಗಿದ್ದರು. ಅವರೇನು ಆರ್ಥಿಕ ತಜ್ಞರೇ? ಸಹಕಾರ ಕಾಯ್ದೆ ನಿಮ್ಮ ಪರಿಮಿತಿಯಲ್ಲಿ ಮಾತ್ರ ಇರಬೇಕಾ?, ಅದು ಎಲ್ಲರಿಗೂ ವಿಸ್ತಾರ ಆಗಬೇಕು ಎಂದರು.

ಸದನದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಎನ್ನುವ ಬದಲು ಸಹಕಾರ ವಲಯಕ್ಕೆ ಮೀಸಲಾತಿ ಕೊಟ್ಟರೆ ಹಾಳಾಗುತ್ತದೆ ಎನ್ನುತ್ತೀರಿ ಎಂದರೆ ನಿಮ್ಮ ಕೊಳಕು ಮನಸ್ಸು, ಸ್ವಾರ್ಥ ಹೇಗಿದೆ ಎಂದು ಗೊತ್ತಾಗುತ್ತದೆ. ದಲಿತರ, ಹಿಂದುಳಿದ ವರ್ಗದವರ ವೋಟು, ಅಽಕಾರ ಪಡೆದು, ನ್ಯಾಯ ಬಿಟ್ಟು ಅನ್ಯಾಯದ ಮಾತುಗಳನ್ನು ಆಡಿದ್ದೀರಿ. ನಿಮ್ಮ ಮೇಲೆ ಕಾನೂನು ಚೌಕಟ್ಟಿನಲ್ಲಿ ಕೇಸ್ ದಾಖಲು ಮಾಡಬೇಕು. ನೀವು ರಾಜೀನಾಮೆ ಕೊಡುವವರೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರ ಪಾಲಿಕೆ ಮಾಜಿ ಸದಸ್ಯೆ ಪಲ್ಲವಿ ಬೇಗಂ, ಸುನಿಲ್, ವಿಶ್ವ, ಆಟೋ ಪುಟ್ಟ, ದೇವನೂರು ಪುಟ್ಟನಂಜಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago