ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ ಮಾಡಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮಾಜಿ ಮಹಾಪೌರ ಪುರುಷೋತ್ತಮ್, ಸಹಕಾರ ಕ್ಷೇತ್ರ ಯಾವ ಉದ್ದೇಶದಿಂದ ಸ್ಥಾಪನೆ ಆಗಿದೆ ಎಂದು ಜಿ.ಟಿ.ದೇವೇಗೌಡ ಅವರು ಇನ್ನೂ ಅರ್ಥ ಮಾಡಿಕೊಂಡಿಲ್ಲ. ಅದು ಒಂದು ವರ್ಗಕ್ಕೆ ಸೀಮಿತ ಅಲ್ಲ. ಪ್ರತೀ ಬಡವನಿಗೂ ಅವಕಾಶ ಸಿಗಬೇಕು. ಆದರೆ, ೪೫ ವರ್ಷ ನಿರಂತರ ಎಲ್ಲಾ ಸವಲತ್ತುಗಳನ್ನು ಜಿ.ಟಿ.ದೇವೇಗೌಡ ಪಡೆದಿದ್ದಾರೆ. ಪ್ರತೀ ವಿಚಾರವನ್ನು ತಾನೇ ಮನದಟ್ಟು ಮಾಡಿಕೊಂಡು ಸಹಕಾರ ಕ್ಷೇತ್ರದ ಅರಿವು ಬೇರೆ ಯಾರಿಗೂ ಇರಬಾರದು ಎಂದುಕೊಂಡಿದ್ದಾರೆ. ಅವರು ಯಾವ ವಿವಿಯಲ್ಲಿ ಪ್ರೊಫೆಸರ್ ಆಗಿದ್ದರು. ಅವರೇನು ಆರ್ಥಿಕ ತಜ್ಞರೇ? ಸಹಕಾರ ಕಾಯ್ದೆ ನಿಮ್ಮ ಪರಿಮಿತಿಯಲ್ಲಿ ಮಾತ್ರ ಇರಬೇಕಾ?, ಅದು ಎಲ್ಲರಿಗೂ ವಿಸ್ತಾರ ಆಗಬೇಕು ಎಂದರು.
ಸದನದಲ್ಲಿ ಎಲ್ಲರಿಗೂ ಸಮಾನತೆ ಇರಬೇಕು ಎನ್ನುವ ಬದಲು ಸಹಕಾರ ವಲಯಕ್ಕೆ ಮೀಸಲಾತಿ ಕೊಟ್ಟರೆ ಹಾಳಾಗುತ್ತದೆ ಎನ್ನುತ್ತೀರಿ ಎಂದರೆ ನಿಮ್ಮ ಕೊಳಕು ಮನಸ್ಸು, ಸ್ವಾರ್ಥ ಹೇಗಿದೆ ಎಂದು ಗೊತ್ತಾಗುತ್ತದೆ. ದಲಿತರ, ಹಿಂದುಳಿದ ವರ್ಗದವರ ವೋಟು, ಅಽಕಾರ ಪಡೆದು, ನ್ಯಾಯ ಬಿಟ್ಟು ಅನ್ಯಾಯದ ಮಾತುಗಳನ್ನು ಆಡಿದ್ದೀರಿ. ನಿಮ್ಮ ಮೇಲೆ ಕಾನೂನು ಚೌಕಟ್ಟಿನಲ್ಲಿ ಕೇಸ್ ದಾಖಲು ಮಾಡಬೇಕು. ನೀವು ರಾಜೀನಾಮೆ ಕೊಡುವವರೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನಗರ ಪಾಲಿಕೆ ಮಾಜಿ ಸದಸ್ಯೆ ಪಲ್ಲವಿ ಬೇಗಂ, ಸುನಿಲ್, ವಿಶ್ವ, ಆಟೋ ಪುಟ್ಟ, ದೇವನೂರು ಪುಟ್ಟನಂಜಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…