Protest Near KRS
ಮೈಸೂರು: ರೈತರ ಜೀವನಾಡಿ ಕೆಆರ್ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, 88 ವರ್ಷಗಳ ಕೆಆರ್ಎಸ್ ಡ್ಯಾಂ ಬಳಿ ಯಾವುದೇ ಗಣಿಗಾರಿಕೆ ನಡೆಸಬಾರದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈಗ ಅಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡಿದರೆ ಅಣೆಕಟ್ಟೆಗೆ ಧಕ್ಕೆ ಉಂಟಾಗುತ್ತದೆ. ಯಾವುದೇ ಕಾರಣಕ್ಕೂ ಅಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡುವುದು ಬೇಡ. ಅದರ ಬದಲು ಮೇಕೆದಾಟು ಯೋಜನೆ ಕೈಗೆತ್ತಿಕೊಂಡು ನಾಡಿಗೆ ಒಳಿತಾಗುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ನಾಲ ಬೀದಿ ರವಿ ಮತ್ತು ಬಾಲಕೃಷ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕನ್ನಡಪರ ಸಂಘಟಕರು ಭಾಗಿಯಾಗಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…