ಮೈಸೂರು ನಗರ

ಬಜೆಟ್‌ನಲ್ಲಿ ಪೌರ ಕಾರ್ಮಿಕರ ಕಡೆಗಣನೆ ಖಂಡಿಸಿ ನಾಳೆ ಪ್ರತಿಭಟನೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್‌.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ ಯಾವುದೇ ಯೋಜನೆಗಳನ್ನು ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರ ಪಾವತಿ ಮೂಲಕ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಈ ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿರುವುದರ ಕುರಿತಾಗಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ಮಾಡುತ್ತೇವೆ. ಜಿಲ್ಲೆಯಾದ್ಯಂತ ಇರುವ 13 ಯುಎಲ್‌ಬಿಗಳಲ್ಲಿ ಕೆಲಸ ಮಾಡುವ ಸಾವಿರಾರು ಪೌರ ಕಾರ್ಮಿಕರುಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ. ಜೊತೆಗೆ ತಾಲೂಕು ಕೇಂದ್ರಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಲಿದ್ದಾರೆ.

ನೇರ ಪಾವತಿ ಇಲ್ಲದೇ ಏಜೆನ್ಸಿಗಳ ಮೂಲಕ ನಮಗೆ ವೇತನ ಸಿಗುತ್ತಿದೆ. ಅವರು ನಮಗೆ ಕಡಿಮೆ ಸಂಬಳ ನೀಡುತ್ತಾರೆ. ನೇರ ಪಾವತಿ ಮೂಲಕ ಸಂಬಳ ನೀಡಿದರೆ 21 ಸಾವಿರ ಸಿಗುತ್ತದೆ. ಏಜೆನ್ಸಿಗಳ ಮೂಲಕ ಕೊಟ್ಟರೆ ಕೇವಲ 15 ಸಾವಿರ ಸಿಗುತ್ತದೆ. ಅದರಲ್ಲೂ ಖಾಸಗಿ ಏಜೆನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ ಕಾರಣ ನೇರ ಪಾವತಿ ಮೂಲಕ ಸರ್ಕಾರವೇ ವೇತನ ಹಾಕಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಮಂಚಯ್ಯ, ವಸಂತ ಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

6 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

6 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

6 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

7 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

8 hours ago