ಮೈಸೂರು ನಗರ

ಬಜೆಟ್‌ನಲ್ಲಿ ಪೌರ ಕಾರ್ಮಿಕರ ಕಡೆಗಣನೆ ಖಂಡಿಸಿ ನಾಳೆ ಪ್ರತಿಭಟನೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್‌.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ ಯಾವುದೇ ಯೋಜನೆಗಳನ್ನು ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರ ಪಾವತಿ ಮೂಲಕ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಈ ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿರುವುದರ ಕುರಿತಾಗಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ಮಾಡುತ್ತೇವೆ. ಜಿಲ್ಲೆಯಾದ್ಯಂತ ಇರುವ 13 ಯುಎಲ್‌ಬಿಗಳಲ್ಲಿ ಕೆಲಸ ಮಾಡುವ ಸಾವಿರಾರು ಪೌರ ಕಾರ್ಮಿಕರುಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ. ಜೊತೆಗೆ ತಾಲೂಕು ಕೇಂದ್ರಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಲಿದ್ದಾರೆ.

ನೇರ ಪಾವತಿ ಇಲ್ಲದೇ ಏಜೆನ್ಸಿಗಳ ಮೂಲಕ ನಮಗೆ ವೇತನ ಸಿಗುತ್ತಿದೆ. ಅವರು ನಮಗೆ ಕಡಿಮೆ ಸಂಬಳ ನೀಡುತ್ತಾರೆ. ನೇರ ಪಾವತಿ ಮೂಲಕ ಸಂಬಳ ನೀಡಿದರೆ 21 ಸಾವಿರ ಸಿಗುತ್ತದೆ. ಏಜೆನ್ಸಿಗಳ ಮೂಲಕ ಕೊಟ್ಟರೆ ಕೇವಲ 15 ಸಾವಿರ ಸಿಗುತ್ತದೆ. ಅದರಲ್ಲೂ ಖಾಸಗಿ ಏಜೆನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ ಕಾರಣ ನೇರ ಪಾವತಿ ಮೂಲಕ ಸರ್ಕಾರವೇ ವೇತನ ಹಾಕಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಮಂಚಯ್ಯ, ವಸಂತ ಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

5 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

6 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

6 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

6 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

6 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

7 hours ago