ಮೈಸೂರು: ರಾಜ್ಯ ಬಜೆಟ್ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್ನಲ್ಲಿ ನಮ್ಮ ಪರವಾದ ಯಾವುದೇ ಯೋಜನೆಗಳನ್ನು ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರ ಪಾವತಿ ಮೂಲಕ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಈ ಬಜೆಟ್ನಲ್ಲಿ ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಜೆಟ್ನಲ್ಲಿ ನಮ್ಮನ್ನು ಕಡೆಗಣಿಸಿರುವುದರ ಕುರಿತಾಗಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡುತ್ತೇವೆ. ಜಿಲ್ಲೆಯಾದ್ಯಂತ ಇರುವ 13 ಯುಎಲ್ಬಿಗಳಲ್ಲಿ ಕೆಲಸ ಮಾಡುವ ಸಾವಿರಾರು ಪೌರ ಕಾರ್ಮಿಕರುಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ. ಜೊತೆಗೆ ತಾಲೂಕು ಕೇಂದ್ರಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಲಿದ್ದಾರೆ.
ನೇರ ಪಾವತಿ ಇಲ್ಲದೇ ಏಜೆನ್ಸಿಗಳ ಮೂಲಕ ನಮಗೆ ವೇತನ ಸಿಗುತ್ತಿದೆ. ಅವರು ನಮಗೆ ಕಡಿಮೆ ಸಂಬಳ ನೀಡುತ್ತಾರೆ. ನೇರ ಪಾವತಿ ಮೂಲಕ ಸಂಬಳ ನೀಡಿದರೆ 21 ಸಾವಿರ ಸಿಗುತ್ತದೆ. ಏಜೆನ್ಸಿಗಳ ಮೂಲಕ ಕೊಟ್ಟರೆ ಕೇವಲ 15 ಸಾವಿರ ಸಿಗುತ್ತದೆ. ಅದರಲ್ಲೂ ಖಾಸಗಿ ಏಜೆನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ ಕಾರಣ ನೇರ ಪಾವತಿ ಮೂಲಕ ಸರ್ಕಾರವೇ ವೇತನ ಹಾಕಬೇಕು ಎಂದು ಆಗ್ರಹಿಸುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಮಂಚಯ್ಯ, ವಸಂತ ಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…