ಮೈಸೂರು ನಗರ

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿಗೆ ನೇಮಕ ಮಾಡಿರುವ ಸಿಬ್ಬಂದಿ ಏ.16 ರಿಂದ ಮೇ 15ರ ಅವಧಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಜನಗಣತಿಗೆ ಪೂರಕವಾದ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ಕಾರ್ಯವನ್ನು ಸುಗಮಗೊಳಿಸುವ ಸಲುವಾಗಿ ‘ಸ್ವಯಂ ಗಣತಿ’ಗೆ ಅವಕಾಶ ನೀಡಲಾಗಿದ್ದು, ಈ ಸ್ವಯಂ ಗಣತಿಯು ಏ.15ರವರೆಗೆ ನಡೆಯಲಿದೆ. ಸಾರ್ವಜನಿಕರು www.se.census.gov.in ಆನ್‌ಲೈನ್ ಪೋರ್ಟಲ್ ಮೂಲಕ ಮಾಹಿತಿಯನ್ನು ಭರ್ತಿ ಮಾಡಬಹುದು ಎಂದು ತಿಳಿಸಿದರು.

ಸ್ವಯಂ ಗಣತಿಯಡಿ ಮಾಹಿತಿ ಭರ್ತಿ ಮಾಡಿದ ನಂತರ ದೊರೆಯುವ ಸ್ವೀಕೃತಿ ಸಂಖ್ಯೆಯನ್ನು ಜನಗಣತಿಗೆ ಮನೆಗೆ ಬರುವ ಗಣತಿದಾರರಿಗೆ ನೀಡಿದರೆ ಸಾಕು. ಒಂದು ವೇಳೆ ಸ್ವಯಂ ಗಣತಿ ಸಂದರ್ಭ ತಪ್ಪಾದ ಮಾಹಿತಿ ಅಪ್ಲೋಡ್ ಮಾಡಿದರೆ ನಿಮ್ಮ ಮನೆಗೆ ಬರುವ ಗಣತಿದಾರರ ಮೂಲಕ ತಿದ್ದುಪಡಿ ಮಾಡಲು ಅವಕಾಶವಿದೆ ಎಂದರು.

ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಏ.16ರಿಂದ ಮೇ.15ರವರೆಗೆ ಮನೆಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯಲಿದೆ. 2ನೇ ಹಂತದ ಜನಗಣತಿ 2027ರ ಫೆಬ್ರವರಿಯಲ್ಲಿ ನಡೆಯಲಿದೆ. ಮೊದಲ ಹಂತದ ಜನಗಣತಿಯ ಸಂದರ್ಭ ಎಷ್ಟು ಮನೆಗಳ ಇವೆ? ಕಚ್ಚಾ ಮನೆಯೇ ಅಥವಾ ಪಕ್ಕಾ ಮನೆಯೇ, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಮೋಟಾರ್ ಸೈಕಲ್, ಕಾರು ಇವೆಯೇ?, ಅಡುಗೆಗೆ ಬಳಸುವ ಇಂಧನ, ಶೌಚಗೃಹ, ಸ್ನಾನಗೃಹದ ಲಭ್ಯತೆ ಮುಂತಾದ 33 ಪ್ರಶ್ನೆಗಳಿಗೆ ಮಾಹಿತಿ ಪಡೆಯಲಾಗುವುದು. ಎರಡನೇ ಹಂತದಲ್ಲಿ ಮನೆಯಲ್ಲಿ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದು ಹೇಳಿದರು.

ಪ್ರಸಕ್ತ ಜನಗಣತಿಯಲ್ಲಿ ದತ್ತಾಂಶ ಸಂಗ್ರಹಣೆಯ ಗುಣಮಟ್ಟ ಹೆಚ್ಚಿಸಲು ಮತ್ತು ಶೀಘ್ರದಲ್ಲೇ ಗಣತಿಯ ಮಾಹಿತಿ ಬಿಡುಗಡೆ ಮಾಡಲು ಮೊಬೈಲ್ ಅಪ್ಲಿಕೇಷನ್‌ಗಳು ಹಾಗೂ ಪೋರ್ಟಲ್‌ಗಳಂತಹ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜನರ ಆರ್ಥಿಕ ಚಟುವಟಿಕೆ, ಶಿಕ್ಷಣ, ವಸತಿ, ಗೃಹ ಸೌಲಭ್ಯಗಳು, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಭಾಷೆ, ಧರ್ಮ, ಅಂಗವೈಕಲ್ಯ, ಇತರ ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಜನಸಂಖ್ಯಾ ದತ್ತಾಂಶ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರಪಾಲಿಕೆ ಉಪ ಆಯುಕ್ತ ಹಾಗೂ ಮೈಸೂರು ನಗರ ಜನಗಣತಿ ಅಧಿಕಾರಿ ಜಿ.ಎಸ್.ಸೋಮಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

3 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

5 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

5 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

6 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

6 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

7 hours ago