ಮೈಸೂರು ನಗರ

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿಗೆ ನೇಮಕ ಮಾಡಿರುವ ಸಿಬ್ಬಂದಿ ಏ.16 ರಿಂದ ಮೇ 15ರ ಅವಧಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಜನಗಣತಿಗೆ ಪೂರಕವಾದ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ಕಾರ್ಯವನ್ನು ಸುಗಮಗೊಳಿಸುವ ಸಲುವಾಗಿ ‘ಸ್ವಯಂ ಗಣತಿ’ಗೆ ಅವಕಾಶ ನೀಡಲಾಗಿದ್ದು, ಈ ಸ್ವಯಂ ಗಣತಿಯು ಏ.15ರವರೆಗೆ ನಡೆಯಲಿದೆ. ಸಾರ್ವಜನಿಕರು www.se.census.gov.in ಆನ್‌ಲೈನ್ ಪೋರ್ಟಲ್ ಮೂಲಕ ಮಾಹಿತಿಯನ್ನು ಭರ್ತಿ ಮಾಡಬಹುದು ಎಂದು ತಿಳಿಸಿದರು.

ಸ್ವಯಂ ಗಣತಿಯಡಿ ಮಾಹಿತಿ ಭರ್ತಿ ಮಾಡಿದ ನಂತರ ದೊರೆಯುವ ಸ್ವೀಕೃತಿ ಸಂಖ್ಯೆಯನ್ನು ಜನಗಣತಿಗೆ ಮನೆಗೆ ಬರುವ ಗಣತಿದಾರರಿಗೆ ನೀಡಿದರೆ ಸಾಕು. ಒಂದು ವೇಳೆ ಸ್ವಯಂ ಗಣತಿ ಸಂದರ್ಭ ತಪ್ಪಾದ ಮಾಹಿತಿ ಅಪ್ಲೋಡ್ ಮಾಡಿದರೆ ನಿಮ್ಮ ಮನೆಗೆ ಬರುವ ಗಣತಿದಾರರ ಮೂಲಕ ತಿದ್ದುಪಡಿ ಮಾಡಲು ಅವಕಾಶವಿದೆ ಎಂದರು.

ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಏ.16ರಿಂದ ಮೇ.15ರವರೆಗೆ ಮನೆಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯಲಿದೆ. 2ನೇ ಹಂತದ ಜನಗಣತಿ 2027ರ ಫೆಬ್ರವರಿಯಲ್ಲಿ ನಡೆಯಲಿದೆ. ಮೊದಲ ಹಂತದ ಜನಗಣತಿಯ ಸಂದರ್ಭ ಎಷ್ಟು ಮನೆಗಳ ಇವೆ? ಕಚ್ಚಾ ಮನೆಯೇ ಅಥವಾ ಪಕ್ಕಾ ಮನೆಯೇ, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಮೋಟಾರ್ ಸೈಕಲ್, ಕಾರು ಇವೆಯೇ?, ಅಡುಗೆಗೆ ಬಳಸುವ ಇಂಧನ, ಶೌಚಗೃಹ, ಸ್ನಾನಗೃಹದ ಲಭ್ಯತೆ ಮುಂತಾದ 33 ಪ್ರಶ್ನೆಗಳಿಗೆ ಮಾಹಿತಿ ಪಡೆಯಲಾಗುವುದು. ಎರಡನೇ ಹಂತದಲ್ಲಿ ಮನೆಯಲ್ಲಿ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದು ಹೇಳಿದರು.

ಪ್ರಸಕ್ತ ಜನಗಣತಿಯಲ್ಲಿ ದತ್ತಾಂಶ ಸಂಗ್ರಹಣೆಯ ಗುಣಮಟ್ಟ ಹೆಚ್ಚಿಸಲು ಮತ್ತು ಶೀಘ್ರದಲ್ಲೇ ಗಣತಿಯ ಮಾಹಿತಿ ಬಿಡುಗಡೆ ಮಾಡಲು ಮೊಬೈಲ್ ಅಪ್ಲಿಕೇಷನ್‌ಗಳು ಹಾಗೂ ಪೋರ್ಟಲ್‌ಗಳಂತಹ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜನರ ಆರ್ಥಿಕ ಚಟುವಟಿಕೆ, ಶಿಕ್ಷಣ, ವಸತಿ, ಗೃಹ ಸೌಲಭ್ಯಗಳು, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಭಾಷೆ, ಧರ್ಮ, ಅಂಗವೈಕಲ್ಯ, ಇತರ ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಜನಸಂಖ್ಯಾ ದತ್ತಾಂಶ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರಪಾಲಿಕೆ ಉಪ ಆಯುಕ್ತ ಹಾಗೂ ಮೈಸೂರು ನಗರ ಜನಗಣತಿ ಅಧಿಕಾರಿ ಜಿ.ಎಸ್.ಸೋಮಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

2 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

2 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago