ಮೈಸೂರು ನಗರ

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿಗೆ ನೇಮಕ ಮಾಡಿರುವ ಸಿಬ್ಬಂದಿ ಏ.16 ರಿಂದ ಮೇ 15ರ ಅವಧಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಜನಗಣತಿಗೆ ಪೂರಕವಾದ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ಕಾರ್ಯವನ್ನು ಸುಗಮಗೊಳಿಸುವ ಸಲುವಾಗಿ ‘ಸ್ವಯಂ ಗಣತಿ’ಗೆ ಅವಕಾಶ ನೀಡಲಾಗಿದ್ದು, ಈ ಸ್ವಯಂ ಗಣತಿಯು ಏ.15ರವರೆಗೆ ನಡೆಯಲಿದೆ. ಸಾರ್ವಜನಿಕರು www.se.census.gov.in ಆನ್‌ಲೈನ್ ಪೋರ್ಟಲ್ ಮೂಲಕ ಮಾಹಿತಿಯನ್ನು ಭರ್ತಿ ಮಾಡಬಹುದು ಎಂದು ತಿಳಿಸಿದರು.

ಸ್ವಯಂ ಗಣತಿಯಡಿ ಮಾಹಿತಿ ಭರ್ತಿ ಮಾಡಿದ ನಂತರ ದೊರೆಯುವ ಸ್ವೀಕೃತಿ ಸಂಖ್ಯೆಯನ್ನು ಜನಗಣತಿಗೆ ಮನೆಗೆ ಬರುವ ಗಣತಿದಾರರಿಗೆ ನೀಡಿದರೆ ಸಾಕು. ಒಂದು ವೇಳೆ ಸ್ವಯಂ ಗಣತಿ ಸಂದರ್ಭ ತಪ್ಪಾದ ಮಾಹಿತಿ ಅಪ್ಲೋಡ್ ಮಾಡಿದರೆ ನಿಮ್ಮ ಮನೆಗೆ ಬರುವ ಗಣತಿದಾರರ ಮೂಲಕ ತಿದ್ದುಪಡಿ ಮಾಡಲು ಅವಕಾಶವಿದೆ ಎಂದರು.

ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಏ.16ರಿಂದ ಮೇ.15ರವರೆಗೆ ಮನೆಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯಲಿದೆ. 2ನೇ ಹಂತದ ಜನಗಣತಿ 2027ರ ಫೆಬ್ರವರಿಯಲ್ಲಿ ನಡೆಯಲಿದೆ. ಮೊದಲ ಹಂತದ ಜನಗಣತಿಯ ಸಂದರ್ಭ ಎಷ್ಟು ಮನೆಗಳ ಇವೆ? ಕಚ್ಚಾ ಮನೆಯೇ ಅಥವಾ ಪಕ್ಕಾ ಮನೆಯೇ, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಮೋಟಾರ್ ಸೈಕಲ್, ಕಾರು ಇವೆಯೇ?, ಅಡುಗೆಗೆ ಬಳಸುವ ಇಂಧನ, ಶೌಚಗೃಹ, ಸ್ನಾನಗೃಹದ ಲಭ್ಯತೆ ಮುಂತಾದ 33 ಪ್ರಶ್ನೆಗಳಿಗೆ ಮಾಹಿತಿ ಪಡೆಯಲಾಗುವುದು. ಎರಡನೇ ಹಂತದಲ್ಲಿ ಮನೆಯಲ್ಲಿ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದು ಹೇಳಿದರು.

ಪ್ರಸಕ್ತ ಜನಗಣತಿಯಲ್ಲಿ ದತ್ತಾಂಶ ಸಂಗ್ರಹಣೆಯ ಗುಣಮಟ್ಟ ಹೆಚ್ಚಿಸಲು ಮತ್ತು ಶೀಘ್ರದಲ್ಲೇ ಗಣತಿಯ ಮಾಹಿತಿ ಬಿಡುಗಡೆ ಮಾಡಲು ಮೊಬೈಲ್ ಅಪ್ಲಿಕೇಷನ್‌ಗಳು ಹಾಗೂ ಪೋರ್ಟಲ್‌ಗಳಂತಹ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜನರ ಆರ್ಥಿಕ ಚಟುವಟಿಕೆ, ಶಿಕ್ಷಣ, ವಸತಿ, ಗೃಹ ಸೌಲಭ್ಯಗಳು, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಭಾಷೆ, ಧರ್ಮ, ಅಂಗವೈಕಲ್ಯ, ಇತರ ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಜನಸಂಖ್ಯಾ ದತ್ತಾಂಶ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರಪಾಲಿಕೆ ಉಪ ಆಯುಕ್ತ ಹಾಗೂ ಮೈಸೂರು ನಗರ ಜನಗಣತಿ ಅಧಿಕಾರಿ ಜಿ.ಎಸ್.ಸೋಮಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

5 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

7 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

11 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago