Public Appreciate Former Municipal Member K.V. Sridhar’s Initiative
ಮೈಸೂರು: ಕಳೆದ ನಾಲ್ಕು ದಿನಗಳಿಂದ ಮೈಸೂರು ಮಹಾನಗರ ಪಾಲಿಕೆಯ ನೌಕರರು ಹಾಗೂ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮೈಸೂರು ನಗರದ ಬಡಾವಣೆಗಳಲ್ಲಿ ಕಸ ಸಂಗ್ರಹ ಕಾರ್ಯ ಸ್ಥಗಿತಗೊಂಡಿದ್ದು, ಇತ್ತ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಸ್ವಂತ ಖರ್ಚಿನಿಂದಲೇ ಸ್ವತಃ ತಾವೇ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುತ್ತಿದ್ದಾರೆ.
ಮೈಸೂರಿನ ಹೆಬ್ಬಾಳ್ ಹಾಗೂ ಸೂರ್ಯ ಬೇಕರಿ ಸಮೀಪದ ಬಡಾವಣೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಕಸ ಸಂಗ್ರಹಿಸಲು ಪೌರ ಕಾರ್ಮಿಕರು ಬರುತ್ತಿಲ್ಲ. ಆದ್ದರಿಂದ ಶ್ರೀಧರ್ ಅವರು ನಾಲ್ಕು ಟ್ರ್ಯಾಕ್ಟರ್ಗಳ ಮೂಲಕ ತಮ್ಮ ವಾರ್ಡ್ನಲ್ಲಿ ತಾವು ಹಾಗೂ ಅವರ ಸ್ನೇಹಿತರೊಂದಿಗೆ ಮನೆ ಮನೆಗೆ ತೆರಳಿ ಕಳೆದ ಮೂರು ದಿನಗಳಿಂದ ಸಂಗ್ರಹಗೊಂಡಿದ್ದ ಕಸವನ್ನು ಸಂಗ್ರಹಿಸಿ ಜನರ ಪಾಲಿಗೆ ನೆರವಾಗಿದ್ದಾರೆ.
ಈ ವೇಳೆ ಮಾತನಾಡಿದ ವಾರ್ಡ್ನ ನಿವಾಸಿಗಳು, ಪಾಲಿಕೆ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಯಾವುದೇ ಸಂದರ್ಭದಲ್ಲೂ ಸಮಸ್ಯೆ ಎದುರಾದಾಗ ಒಂದು ಕರೆ ಮಾಡಿದರೆ ಸಾಕು ಅಷ್ಟರಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ. ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೇ ಕಸ ಸಂಗ್ರಹವಾಗಿದ್ದರಿಂದ ಸೊಳ್ಳೆಗಳ ಕಾಟವು ಹೆಚ್ಚಾಗಿತ್ತು. ಸದ್ಯ ಇಂದು ಅವರೇ ಟ್ರ್ಯಾಕ್ಟರ್ ಮೂಲಕ ಕಸ ಸಂಗ್ರಹಿಸುತ್ತಿದ್ದಾರೆ. ಆದ್ದರಿಂದ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ದಕ್ಷಿಣ ಕನ್ನಡ: ನಾಳೆ(ಮಾರ್ಚ್.1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.…
ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು…
ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ರಾಷ್ಟ್ರ ವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮಿರ್ನಲ್ಲಿ…
ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ…
ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್ ಶಾಸಕ ಮಂಥರ್ ಗೌಡ ಖಂಡಿಸಿದ್ದಾರೆ. ಈ…
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…