ಮೈಸೂರು ನಗರ

ಸ್ವಂತ ಖರ್ಚಿನಲ್ಲೇ ಕಸ ಸಂಗ್ರಹ: ಪಾಲಿಕೆ ಮಾಜಿ ಸದಸ್ಯ ಕೆ.ವಿ.ಶ್ರೀಧರ್‌ ನಡೆಗೆ ಸಾರ್ವಜನಿಕರ ಮೆಚ್ಚುಗೆ

ಮೈಸೂರು: ಕಳೆದ ನಾಲ್ಕು ದಿನಗಳಿಂದ ಮೈಸೂರು ಮಹಾನಗರ ಪಾಲಿಕೆಯ ನೌಕರರು ಹಾಗೂ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮೈಸೂರು ನಗರದ ಬಡಾವಣೆಗಳಲ್ಲಿ ಕಸ ಸಂಗ್ರಹ ಕಾರ್ಯ ಸ್ಥಗಿತಗೊಂಡಿದ್ದು, ಇತ್ತ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಸ್ವಂತ ಖರ್ಚಿನಿಂದಲೇ ಸ್ವತಃ ತಾವೇ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುತ್ತಿದ್ದಾರೆ.

ಮೈಸೂರಿನ ಹೆಬ್ಬಾಳ್ ಹಾಗೂ ಸೂರ್ಯ ಬೇಕರಿ ಸಮೀಪದ ಬಡಾವಣೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಕಸ ಸಂಗ್ರಹಿಸಲು ಪೌರ ಕಾರ್ಮಿಕರು ಬರುತ್ತಿಲ್ಲ. ಆದ್ದರಿಂದ ಶ್ರೀಧರ್ ಅವರು ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ತಮ್ಮ ವಾರ್ಡ್‌ನಲ್ಲಿ ತಾವು ಹಾಗೂ ಅವರ ಸ್ನೇಹಿತರೊಂದಿಗೆ ಮನೆ ಮನೆಗೆ ತೆರಳಿ ಕಳೆದ ಮೂರು ದಿನಗಳಿಂದ ಸಂಗ್ರಹಗೊಂಡಿದ್ದ ಕಸವನ್ನು ಸಂಗ್ರಹಿಸಿ ಜನರ ಪಾಲಿಗೆ ನೆರವಾಗಿದ್ದಾರೆ.

ಈ ವೇಳೆ ಮಾತನಾಡಿದ ವಾರ್ಡ್‌ನ ನಿವಾಸಿಗಳು, ಪಾಲಿಕೆ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಯಾವುದೇ ಸಂದರ್ಭದಲ್ಲೂ ಸಮಸ್ಯೆ ಎದುರಾದಾಗ ಒಂದು ಕರೆ ಮಾಡಿದರೆ ಸಾಕು ಅಷ್ಟರಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ. ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೇ ಕಸ ಸಂಗ್ರಹವಾಗಿದ್ದರಿಂದ ಸೊಳ್ಳೆಗಳ ಕಾಟವು ಹೆಚ್ಚಾಗಿತ್ತು. ಸದ್ಯ ಇಂದು ಅವರೇ ಟ್ರ್ಯಾಕ್ಟರ್ ಮೂಲಕ ಕಸ ಸಂಗ್ರಹಿಸುತ್ತಿದ್ದಾರೆ. ಆದ್ದರಿಂದ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

4 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

4 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

4 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

4 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

6 hours ago