ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶದ ಸುತ್ತಲೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163 ರೀತ್ಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳು
ಡಿ.ಬನುಮಯ್ಯ ಪಿಯು ಕಾಲೇಜು, ಸಯ್ಯಾಜಿರಾವ್ ರಸ್ತೆ, ಊಟಿ ರಸ್ತೆ, ಜೆಎಸ್ಎಸ್ ಪಿಯು ಕಾಲೇಜು, ಮಹಾರಾಜ ಸರ್ಕಾರಿ ಪಿಯು ಕಾಲೇಜು, ಮರಿಮಲ್ಲಪ್ಪ ಪಿಯು ಕಾಲೇಜು, ಮಹಾರಾಣಿ ಸರ್ಕಾರಿ ಪಿಯು ಕಾಲೇಜು, ಎನ್.ಎಸ್.ರಸ್ತೆ, ಸದ್ವಿದ್ಯಾ ಪದವಿಪೂರ್ವ ಕಾಲೇಜು, ಸರಸ್ವತಿಪುರಂ ಜೆಎಸ್ಎಸ್ ಪದವಿಪೂರ್ವ ಕಾಲೇಜು, ವಿಜಯವಿಠಲ ಪಿಯು ಕಾಲೇಜು, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು, ಎಸ್ಬಿಐಸಿ ಜ್ಞಾನೋದಯ ಪದವಿ ಪೂರ್ವ ಕಾಲೇಜು, ಸೆಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿರುತ್ತವೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಬ್ರೌಸಿಂಗ್ ಸೆಂಟರ್ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…
ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ…