ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶದ ಸುತ್ತಲೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163 ರೀತ್ಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳು
ಡಿ.ಬನುಮಯ್ಯ ಪಿಯು ಕಾಲೇಜು, ಸಯ್ಯಾಜಿರಾವ್ ರಸ್ತೆ, ಊಟಿ ರಸ್ತೆ, ಜೆಎಸ್ಎಸ್ ಪಿಯು ಕಾಲೇಜು, ಮಹಾರಾಜ ಸರ್ಕಾರಿ ಪಿಯು ಕಾಲೇಜು, ಮರಿಮಲ್ಲಪ್ಪ ಪಿಯು ಕಾಲೇಜು, ಮಹಾರಾಣಿ ಸರ್ಕಾರಿ ಪಿಯು ಕಾಲೇಜು, ಎನ್.ಎಸ್.ರಸ್ತೆ, ಸದ್ವಿದ್ಯಾ ಪದವಿಪೂರ್ವ ಕಾಲೇಜು, ಸರಸ್ವತಿಪುರಂ ಜೆಎಸ್ಎಸ್ ಪದವಿಪೂರ್ವ ಕಾಲೇಜು, ವಿಜಯವಿಠಲ ಪಿಯು ಕಾಲೇಜು, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು, ಎಸ್ಬಿಐಸಿ ಜ್ಞಾನೋದಯ ಪದವಿ ಪೂರ್ವ ಕಾಲೇಜು, ಸೆಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿರುತ್ತವೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಬ್ರೌಸಿಂಗ್ ಸೆಂಟರ್ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…