ಮೈಸೂರು ನಗರ

ಮರಣದ ನಂತರವೂ ಜೀವಿಸಿರುವ ಪುನೀತ್‌ ರಾಜಕುಮಾರ್: ನಾರಾಯಣಗೌಡ ಬಣ್ಣನೆ

ವಿವಿಧ ಕ್ಷೇತ್ರದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮೈಸೂರು: ಮಲೆ ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ದಿನದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು.

ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾ.ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ಅವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳಿಕ ಮಾತನಾಡಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿದೆ ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ’ ಎಂದು ಹೇಳಿದರು,

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಮಾತನಾಡಿ,‘ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷ ಮಹಾನ್ ಶ್ರೇಯಸ್, ರಾಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

7 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

8 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

8 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

9 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

9 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

10 hours ago