ಮೈಸೂರು ನಗರ

ಮರಣದ ನಂತರವೂ ಜೀವಿಸಿರುವ ಪುನೀತ್‌ ರಾಜಕುಮಾರ್: ನಾರಾಯಣಗೌಡ ಬಣ್ಣನೆ

ವಿವಿಧ ಕ್ಷೇತ್ರದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮೈಸೂರು: ಮಲೆ ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ದಿನದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು.

ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾ.ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ಅವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳಿಕ ಮಾತನಾಡಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿದೆ ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ’ ಎಂದು ಹೇಳಿದರು,

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಮಾತನಾಡಿ,‘ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷ ಮಹಾನ್ ಶ್ರೇಯಸ್, ರಾಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

10 mins ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

5 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

5 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

9 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

10 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

14 hours ago