ಮೈಸೂರು ನಗರ

ಮರಣದ ನಂತರವೂ ಜೀವಿಸಿರುವ ಪುನೀತ್‌ ರಾಜಕುಮಾರ್: ನಾರಾಯಣಗೌಡ ಬಣ್ಣನೆ

ವಿವಿಧ ಕ್ಷೇತ್ರದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮೈಸೂರು: ಮಲೆ ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ದಿನದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು.

ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾ.ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ಅವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳಿಕ ಮಾತನಾಡಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿದೆ ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ’ ಎಂದು ಹೇಳಿದರು,

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಮಾತನಾಡಿ,‘ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷ ಮಹಾನ್ ಶ್ರೇಯಸ್, ರಾಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

2 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

9 mins ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

13 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

13 hours ago