ಮೈಸೂರು ನಗರ

ಮರಣದ ನಂತರವೂ ಜೀವಿಸಿರುವ ಪುನೀತ್‌ ರಾಜಕುಮಾರ್: ನಾರಾಯಣಗೌಡ ಬಣ್ಣನೆ

ವಿವಿಧ ಕ್ಷೇತ್ರದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮೈಸೂರು: ಮಲೆ ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ದಿನದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು.

ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾ.ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ಅವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳಿಕ ಮಾತನಾಡಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿದೆ ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ’ ಎಂದು ಹೇಳಿದರು,

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಮಾತನಾಡಿ,‘ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷ ಮಹಾನ್ ಶ್ರೇಯಸ್, ರಾಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

10 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

13 hours ago