ಮೈಸೂರು ನಗರ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಮೈಸೂರಿನ ಪೋರಿ

ಮೈಸೂರು: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವ ಗಾದೆ ಮಾತಿನಂತೆ ಮೈಸೂರಿನ ಪೋರಿಯೊಬ್ಬಳು ಮನೆಯಲ್ಲಿಯೇ ವಿಶಿಷ್ಟ ಸಾಧನೆ ಮಾಡಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಹೌದು ಮೈಸೂರು ನಗರದ ಗಾಯಿತ್ರಿಪುರಂನ ಜಾನ್ ಸ್ಯಾಮ್ಯುಯೆಲ್ ಮತ್ತು ದಿವ್ಯ ದಂಪತಿಗಳ ಪುತ್ರಿ ಸಲೋಮಿ ಸ್ತುತಿ ಎಂಬ ಪುಟ್ಟ ಪೋರಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

ಪ್ರೀ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಲೋಮಿ ಸ್ತುತಿ, ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಈಕೆ ಎ ಟು ಜೆಡ್‌ವರೆಗೆ ಬರುವ ಎಲ್ಲಾ ದೇಶಗಳ, ರಾಜ್ಯಗಳ ಹೆಸರು ಮತ್ತು ರಾಜಧಾನಿ ಹೆಸರುಗಳನ್ನು ಕೂಡ ಹೇಳುತ್ತಾಳೆ. ಒಂದರಿಂದ ಹತ್ತರವರೆಗೆ ಏಳು ಭಾಷೆಗಳಲ್ಲಿ ನಂಬರ್ಸ್‌ಗಳನ್ನು ಸರಾಗವಾಗಿ ಹೇಳುವುದರ ಜೊತೆಗೆ ಅಮೇರಿಕಾದ 50 ರಾಜ್ಯಗಳ ಹೆಸರುಗಳನ್ನು ಸಲೀಸಾಗಿ ಒಪ್ಪಿಸುತ್ತಾಳೆ.

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮನೆಯಲ್ಲಿರುವ ತಾಯಿ ಭವ್ಯ, ಸೋದರ ಅತ್ತೆ ರಾಜಮ್ಮ ಅವರ ಸಹಾಯದಿಂದ ಕಲಿಕೆ ಆರಂಭಿಸಿದ ಪುಟ್ಟ ಬಾಲೆ ಈಗ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಪೋಷಕರು ಈಕೆಯನ್ನು ಭವಿಷ್ಯದಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಮಾಡಬೇಕೆಂಬ ಕನಸು ಹೊತ್ತಿದ್ದು, ಅವರ ಕನಸು ನನಸಾಗಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

11 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

11 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

12 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

12 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

12 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

13 hours ago