ಮೈಸೂರು ನಗರ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಮೈಸೂರಿನ ಪೋರಿ

ಮೈಸೂರು: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವ ಗಾದೆ ಮಾತಿನಂತೆ ಮೈಸೂರಿನ ಪೋರಿಯೊಬ್ಬಳು ಮನೆಯಲ್ಲಿಯೇ ವಿಶಿಷ್ಟ ಸಾಧನೆ ಮಾಡಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಹೌದು ಮೈಸೂರು ನಗರದ ಗಾಯಿತ್ರಿಪುರಂನ ಜಾನ್ ಸ್ಯಾಮ್ಯುಯೆಲ್ ಮತ್ತು ದಿವ್ಯ ದಂಪತಿಗಳ ಪುತ್ರಿ ಸಲೋಮಿ ಸ್ತುತಿ ಎಂಬ ಪುಟ್ಟ ಪೋರಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

ಪ್ರೀ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಲೋಮಿ ಸ್ತುತಿ, ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಈಕೆ ಎ ಟು ಜೆಡ್‌ವರೆಗೆ ಬರುವ ಎಲ್ಲಾ ದೇಶಗಳ, ರಾಜ್ಯಗಳ ಹೆಸರು ಮತ್ತು ರಾಜಧಾನಿ ಹೆಸರುಗಳನ್ನು ಕೂಡ ಹೇಳುತ್ತಾಳೆ. ಒಂದರಿಂದ ಹತ್ತರವರೆಗೆ ಏಳು ಭಾಷೆಗಳಲ್ಲಿ ನಂಬರ್ಸ್‌ಗಳನ್ನು ಸರಾಗವಾಗಿ ಹೇಳುವುದರ ಜೊತೆಗೆ ಅಮೇರಿಕಾದ 50 ರಾಜ್ಯಗಳ ಹೆಸರುಗಳನ್ನು ಸಲೀಸಾಗಿ ಒಪ್ಪಿಸುತ್ತಾಳೆ.

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮನೆಯಲ್ಲಿರುವ ತಾಯಿ ಭವ್ಯ, ಸೋದರ ಅತ್ತೆ ರಾಜಮ್ಮ ಅವರ ಸಹಾಯದಿಂದ ಕಲಿಕೆ ಆರಂಭಿಸಿದ ಪುಟ್ಟ ಬಾಲೆ ಈಗ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಪೋಷಕರು ಈಕೆಯನ್ನು ಭವಿಷ್ಯದಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಮಾಡಬೇಕೆಂಬ ಕನಸು ಹೊತ್ತಿದ್ದು, ಅವರ ಕನಸು ನನಸಾಗಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago