ಮೈಸೂರು ನಗರ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಮೈಸೂರಿನ ಪೋರಿ

ಮೈಸೂರು: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವ ಗಾದೆ ಮಾತಿನಂತೆ ಮೈಸೂರಿನ ಪೋರಿಯೊಬ್ಬಳು ಮನೆಯಲ್ಲಿಯೇ ವಿಶಿಷ್ಟ ಸಾಧನೆ ಮಾಡಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಹೌದು ಮೈಸೂರು ನಗರದ ಗಾಯಿತ್ರಿಪುರಂನ ಜಾನ್ ಸ್ಯಾಮ್ಯುಯೆಲ್ ಮತ್ತು ದಿವ್ಯ ದಂಪತಿಗಳ ಪುತ್ರಿ ಸಲೋಮಿ ಸ್ತುತಿ ಎಂಬ ಪುಟ್ಟ ಪೋರಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

ಪ್ರೀ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಲೋಮಿ ಸ್ತುತಿ, ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಈಕೆ ಎ ಟು ಜೆಡ್‌ವರೆಗೆ ಬರುವ ಎಲ್ಲಾ ದೇಶಗಳ, ರಾಜ್ಯಗಳ ಹೆಸರು ಮತ್ತು ರಾಜಧಾನಿ ಹೆಸರುಗಳನ್ನು ಕೂಡ ಹೇಳುತ್ತಾಳೆ. ಒಂದರಿಂದ ಹತ್ತರವರೆಗೆ ಏಳು ಭಾಷೆಗಳಲ್ಲಿ ನಂಬರ್ಸ್‌ಗಳನ್ನು ಸರಾಗವಾಗಿ ಹೇಳುವುದರ ಜೊತೆಗೆ ಅಮೇರಿಕಾದ 50 ರಾಜ್ಯಗಳ ಹೆಸರುಗಳನ್ನು ಸಲೀಸಾಗಿ ಒಪ್ಪಿಸುತ್ತಾಳೆ.

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮನೆಯಲ್ಲಿರುವ ತಾಯಿ ಭವ್ಯ, ಸೋದರ ಅತ್ತೆ ರಾಜಮ್ಮ ಅವರ ಸಹಾಯದಿಂದ ಕಲಿಕೆ ಆರಂಭಿಸಿದ ಪುಟ್ಟ ಬಾಲೆ ಈಗ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಪೋಷಕರು ಈಕೆಯನ್ನು ಭವಿಷ್ಯದಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಮಾಡಬೇಕೆಂಬ ಕನಸು ಹೊತ್ತಿದ್ದು, ಅವರ ಕನಸು ನನಸಾಗಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago