ಮೈಸೂರು ನಗರ

ಉತ್ಪನ್ನಗಳಲ್ಲಿ ಗುಣಮಟ್ಟ ಮುಖ್ಯ: ಡಾ.ಪಿ.ಶಿವರಾಜು

 

ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆಯೇ ಅಥವಾ ಕಳಪೆಯಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.

ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.

ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್‌ ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.

ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.

ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್‌ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.

ಪ್ರತಿಯೊಂದು ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಉತ್ಪನ್ನಗಳ ವೆಬ್‌ ಸೈಟ್: www.bis.gov.in ಹಾಗೂ ಇ- ಮೇಲ್ bnbo@bis.gov.in ನ್ನು ಸಂಪರ್ಕಿಸಬಹುದು ಎಂದು ಕಾರ್ಯಗಾರದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

7 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

8 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

8 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

8 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

8 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

9 hours ago