ಮೈಸೂರು ನಗರ

ಉತ್ಪನ್ನಗಳಲ್ಲಿ ಗುಣಮಟ್ಟ ಮುಖ್ಯ: ಡಾ.ಪಿ.ಶಿವರಾಜು

 

ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆಯೇ ಅಥವಾ ಕಳಪೆಯಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.

ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.

ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್‌ ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.

ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.

ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್‌ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.

ಪ್ರತಿಯೊಂದು ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಉತ್ಪನ್ನಗಳ ವೆಬ್‌ ಸೈಟ್: www.bis.gov.in ಹಾಗೂ ಇ- ಮೇಲ್ bnbo@bis.gov.in ನ್ನು ಸಂಪರ್ಕಿಸಬಹುದು ಎಂದು ಕಾರ್ಯಗಾರದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

6 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

7 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

8 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

8 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

9 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago