ಮೈಸೂರು ನಗರ

ಉತ್ಪನ್ನಗಳಲ್ಲಿ ಗುಣಮಟ್ಟ ಮುಖ್ಯ: ಡಾ.ಪಿ.ಶಿವರಾಜು

 

ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆಯೇ ಅಥವಾ ಕಳಪೆಯಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.

ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.

ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್‌ ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.

ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.

ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್‌ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.

ಪ್ರತಿಯೊಂದು ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಉತ್ಪನ್ನಗಳ ವೆಬ್‌ ಸೈಟ್: www.bis.gov.in ಹಾಗೂ ಇ- ಮೇಲ್ bnbo@bis.gov.in ನ್ನು ಸಂಪರ್ಕಿಸಬಹುದು ಎಂದು ಕಾರ್ಯಗಾರದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

3 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

6 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

6 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

8 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

9 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

10 hours ago