KRS backwaters
ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್ಎಸ್ ಹಿನ್ನೀರು ಪ್ರದೇಶ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿತ್ತು.
ವಾರದ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ್ದರು. ಬಾಗಿನ ಅರ್ಪಣೆ ಮಾಡಿದ ಬಳಿಕವೇ ಡ್ಯಾಂ ಹಿನ್ನೀರಿನಲ್ಲಿ ಅನೈತಿಕ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಯುವಕ-ಯುವತಿಯರು ಮದ್ಯದ ಅಮಲಿನಲ್ಲಿಯೇ ನೀರಿನಲ್ಲಿ ಇಳಿದು ಜೀವದ ಜೊತೆಯೇ ಆಟವಾಡಿದ್ದು, ಕಾವೇರಿ ಮಾತೆಯ ನೀರಿಗೆ ಮೂತ್ರ ವಿಸರ್ಜನೆ ಕೂಡ ಮಾಡಿದ್ದರು.
ಈಜಾಡುವ ನೆಪದಲ್ಲಿ ಅನೈರ್ಮಲ್ಯ ಮಾಡಿದ್ದ ಯುವಸಮೂಹ, ರಾಶಿ- ರಾಶಿ ಪ್ಲಾಸ್ಟಿಕ್ ಪ್ಲೇಟ್ಸ್, ಲೋಟೋ, ಖಾಲಿ ಬಿಯರ್ ಬಾಟಲಿಗಳನ್ನು ನೀರಿಗೆ ಎಸೆದು ಹೋಗಿದ್ದರು.
ಈ ವರದಿ ಎಲ್ಲೆಡೆ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಅಕ್ರಮ ಮದ್ಯ ಸಾಗಿಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹಲವು ಕಾರುಗಳಲ್ಲಿದ್ದ ಮದ್ಯದ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಇನ್ನು ಕಾವೇರಿ ಹಿನ್ನೀರಿನಲ್ಲಿ ಎಣ್ಣೆ ಹೊಡೆಯುವವರನ್ನು ಕೂಡ ಅರೆಸ್ಟ್ ಮಾಡಲಾಗಿದ್ದು, ಅಕ್ರಮ ಮದ್ಯ ಸೇವನೆ, ಮೋಜು- ಮಸ್ತಿಗೆ ಪೊಲೀಸರು ಫುಲ್ ಸ್ಟಾಪ್ ಇಟ್ಟಿದ್ದಾರೆ.
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…