ಮೈಸೂರು ನಗರ

ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ವರದಿ ಬಳಿಕ ಪೊಲೀಸರಿಂದ ಕ್ವಿಕ್‌ ರಿಯಾಕ್ಷನ್‌

ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್‌ಎಸ್‌ ಹಿನ್ನೀರು ಪ್ರದೇಶ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿತ್ತು.

ವಾರದ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ್ದರು. ಬಾಗಿನ ಅರ್ಪಣೆ ಮಾಡಿದ ಬಳಿಕವೇ ಡ್ಯಾಂ ಹಿನ್ನೀರಿನಲ್ಲಿ ಅನೈತಿಕ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಯುವಕ-ಯುವತಿಯರು ಮದ್ಯದ ಅಮಲಿನಲ್ಲಿಯೇ ನೀರಿನಲ್ಲಿ ಇಳಿದು ಜೀವದ ಜೊತೆಯೇ ಆಟವಾಡಿದ್ದು, ಕಾವೇರಿ ಮಾತೆಯ ನೀರಿಗೆ ಮೂತ್ರ ವಿಸರ್ಜನೆ ಕೂಡ ಮಾಡಿದ್ದರು.

ಈಜಾಡುವ ನೆಪದಲ್ಲಿ ಅನೈರ್ಮಲ್ಯ ಮಾಡಿದ್ದ ಯುವಸಮೂಹ, ರಾಶಿ- ರಾಶಿ ಪ್ಲಾಸ್ಟಿಕ್ ಪ್ಲೇಟ್ಸ್, ಲೋಟೋ, ಖಾಲಿ ಬಿಯರ್ ಬಾಟಲಿಗಳನ್ನು ನೀರಿಗೆ ಎಸೆದು ಹೋಗಿದ್ದರು.

ಈ ವರದಿ ಎಲ್ಲೆಡೆ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ಅಕ್ರಮ ಮದ್ಯ ಸಾಗಿಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹಲವು ಕಾರುಗಳಲ್ಲಿದ್ದ ಮದ್ಯದ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇನ್ನು ಕಾವೇರಿ ಹಿನ್ನೀರಿನಲ್ಲಿ ಎಣ್ಣೆ ಹೊಡೆಯುವವರನ್ನು ಕೂಡ ಅರೆಸ್ಟ್ ಮಾಡಲಾಗಿದ್ದು, ಅಕ್ರಮ ಮದ್ಯ ಸೇವನೆ, ಮೋಜು- ಮಸ್ತಿಗೆ ಪೊಲೀಸರು ಫುಲ್‌ ಸ್ಟಾಪ್‌ ಇಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

13 mins ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

27 mins ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

2 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

2 hours ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

2 hours ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

3 hours ago