ಮೈಸೂರು ನಗರ

ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ವರದಿ ಬಳಿಕ ಪೊಲೀಸರಿಂದ ಕ್ವಿಕ್‌ ರಿಯಾಕ್ಷನ್‌

ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ಬಗ್ಗೆ ವರದಿ ಬಂದ ಬಳಿಕ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ತಾಲ್ಲೂಕಿನ ಮೀನಾಕ್ಷಿಪುರದಲ್ಲಿ ಯುವಕ-ಯುವತಿಯರು ನೀರಿನ ಆಳಕ್ಕೆ ಕಾರು ಇಳಿಸಿ ಮೋಜು ಮಸ್ತಿ ಮಾಡಿದ್ದು, ಕೆಆರ್‌ಎಸ್‌ ಹಿನ್ನೀರು ಪ್ರದೇಶ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿತ್ತು.

ವಾರದ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ್ದರು. ಬಾಗಿನ ಅರ್ಪಣೆ ಮಾಡಿದ ಬಳಿಕವೇ ಡ್ಯಾಂ ಹಿನ್ನೀರಿನಲ್ಲಿ ಅನೈತಿಕ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಯುವಕ-ಯುವತಿಯರು ಮದ್ಯದ ಅಮಲಿನಲ್ಲಿಯೇ ನೀರಿನಲ್ಲಿ ಇಳಿದು ಜೀವದ ಜೊತೆಯೇ ಆಟವಾಡಿದ್ದು, ಕಾವೇರಿ ಮಾತೆಯ ನೀರಿಗೆ ಮೂತ್ರ ವಿಸರ್ಜನೆ ಕೂಡ ಮಾಡಿದ್ದರು.

ಈಜಾಡುವ ನೆಪದಲ್ಲಿ ಅನೈರ್ಮಲ್ಯ ಮಾಡಿದ್ದ ಯುವಸಮೂಹ, ರಾಶಿ- ರಾಶಿ ಪ್ಲಾಸ್ಟಿಕ್ ಪ್ಲೇಟ್ಸ್, ಲೋಟೋ, ಖಾಲಿ ಬಿಯರ್ ಬಾಟಲಿಗಳನ್ನು ನೀರಿಗೆ ಎಸೆದು ಹೋಗಿದ್ದರು.

ಈ ವರದಿ ಎಲ್ಲೆಡೆ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕ್ವಿಕ್ ರಿಯಾಕ್ಷನ್ ತೆಗೆದುಕೊಂಡಿದ್ದು, ಮೀನಾಕ್ಷಿಪುರಕ್ಕೆ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ಅಕ್ರಮ ಮದ್ಯ ಸಾಗಿಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹಲವು ಕಾರುಗಳಲ್ಲಿದ್ದ ಮದ್ಯದ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇನ್ನು ಕಾವೇರಿ ಹಿನ್ನೀರಿನಲ್ಲಿ ಎಣ್ಣೆ ಹೊಡೆಯುವವರನ್ನು ಕೂಡ ಅರೆಸ್ಟ್ ಮಾಡಲಾಗಿದ್ದು, ಅಕ್ರಮ ಮದ್ಯ ಸೇವನೆ, ಮೋಜು- ಮಸ್ತಿಗೆ ಪೊಲೀಸರು ಫುಲ್‌ ಸ್ಟಾಪ್‌ ಇಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago