ಮೈಸೂರು ನಗರ

ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿಗೆ ಇಳಿದಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ. 60% ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಡವರ ಮನೆ ಹಂಚಿಕೆಯಲ್ಲೂ ಹಣ ವಸೂಲಿ ಮಾಡುತ್ತಿದ್ದಾರೆ. 36% ಹಣವನ್ನು ವಸತಿ ಇಲಾಖೆಯಲ್ಲೂ ಕೇಳುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲೂ ಲೂಟಿ ಮಾಡಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲೂ ಲೂಟಿ ಆಯಿತು.

ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಹೈಕಮಾಂಡ್‌ಗೆ ಕಪ್ಪಕಾಣಿಕೆ ನೀಡಲು ನಾ ಮುಂದು ತಾ ಮುಂದು ಎಂದು ನಿಂತಿದ್ದಾರೆ. ಹೈಕಮಾಂಡ್‌ಗೆ ಯಾರು ಜಾಸ್ತಿ ಕಪ್ಪಕಾಣಿಕೆ ನೀಡುತ್ತಾರೋ ಅವರಿಗೆ ಬೆಲೆ ಜಾಸ್ತಿ ಆದಂತಾಗಿದೆ. ಬಿಹಾರ್ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಿಂದ ಲೂಟಿ ಮಾಡಲಾಗುತ್ತಿದೆ. ಲೂಟಿ ಹೊಡೆದು ಸಚಿವ ಸ್ಥಾನದಿಂದ ಸಚಿವರು ಮುಂದುವರಿಯುತ್ತಿದ್ದಾರೆ. ನಾಳೆಯಿಂದ ಹೋರಾಟದ ರೂಪುರೇಷೆ ಸಿದ್ದವಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಮುಖ್ಯಮಂತ್ರಿಗಳಿಗೆ ಗೌರವವಿದ್ದರೆ ಇಷ್ಟೊತ್ತಿಗೆ ಸಚಿವರ ರಾಜೀನಾಮೆ ಪಡೆಯಬೇಕಿತ್ತು ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

5 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

6 hours ago