ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ. 60% ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಡವರ ಮನೆ ಹಂಚಿಕೆಯಲ್ಲೂ ಹಣ ವಸೂಲಿ ಮಾಡುತ್ತಿದ್ದಾರೆ. 36% ಹಣವನ್ನು ವಸತಿ ಇಲಾಖೆಯಲ್ಲೂ ಕೇಳುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲೂ ಲೂಟಿ ಮಾಡಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲೂ ಲೂಟಿ ಆಯಿತು.
ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಹೈಕಮಾಂಡ್ಗೆ ಕಪ್ಪಕಾಣಿಕೆ ನೀಡಲು ನಾ ಮುಂದು ತಾ ಮುಂದು ಎಂದು ನಿಂತಿದ್ದಾರೆ. ಹೈಕಮಾಂಡ್ಗೆ ಯಾರು ಜಾಸ್ತಿ ಕಪ್ಪಕಾಣಿಕೆ ನೀಡುತ್ತಾರೋ ಅವರಿಗೆ ಬೆಲೆ ಜಾಸ್ತಿ ಆದಂತಾಗಿದೆ. ಬಿಹಾರ್ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಿಂದ ಲೂಟಿ ಮಾಡಲಾಗುತ್ತಿದೆ. ಲೂಟಿ ಹೊಡೆದು ಸಚಿವ ಸ್ಥಾನದಿಂದ ಸಚಿವರು ಮುಂದುವರಿಯುತ್ತಿದ್ದಾರೆ. ನಾಳೆಯಿಂದ ಹೋರಾಟದ ರೂಪುರೇಷೆ ಸಿದ್ದವಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಮುಖ್ಯಮಂತ್ರಿಗಳಿಗೆ ಗೌರವವಿದ್ದರೆ ಇಷ್ಟೊತ್ತಿಗೆ ಸಚಿವರ ರಾಜೀನಾಮೆ ಪಡೆಯಬೇಕಿತ್ತು ಎಂದು ಕಿಡಿಕಾರಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…