ಮೈಸೂರು ನಗರ

ಮೈಸೂರು ಈಗ ಡ್ರಗ್ಸ್ ನಗರವಾಗಿದೆ: ರಘು ಕೌಟಿಲ್ಯ ಆಕ್ರೋಶ

ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್‌ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್ ನಗರವಾಗಿದೆ. ಮುಂಬೈ ಪೊಲೀಸರು ಮೈಸೂರಿಗೆ ಬಂದು ಡ್ರಗ್ಸ್ ಜಾಲ ಬೇಧಿಸಿದ್ದಾರೆ. ಹಾಗಾದರೆ ಮೈಸೂರು ಪೊಲೀಸರು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಮಾಡಿದರು.

ಇನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಗೃಹ ಇಲಾಖೆ ಸತ್ತು ಹೋಗಿದೆ. ಮುಡಾ ಹಗರಣದ ನಂತರ ಡ್ರಗ್ಸ್‌ ಕೇಸ್‌ ಮೈಸೂರಿನ ದೊಡ್ಡ ಹಗರಣಗಳಲ್ಲಿ ಒಂದಾಗಿದೆ. ಇದರಲ್ಲಿ ಕಾಣದ ಕೈಗಳ ಪ್ರಭಾವಿ ಇದ್ದೆ ಇರುತ್ತದೆ. ನರಸಿಂಹರಾಜ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಳವಾರ್ ಅಮಾನತು ಮಾಡಿ, ಒಂದೇ ದಿನದಲ್ಲಿ ಅಮಾನತು ರದ್ದು ಮಾಡಲಾಗಿದೆ.

ಇದರ ಹಿನ್ನೆಲೆ ಏನು? ಈ ಪ್ರಕರಣದಲ್ಲಿ ಸರ್ಕಾರದ ಪ್ರಭಾವಿ ಕೃಪಾ ಕಟಾಕ್ಷ ಇದೆ. ಪೊಲೀಸರನ್ನು ಕಾರಣ ಕೈ ಕಟ್ಟಿ ಹಾಕಿದೆ. ಅಂತರಾಷ್ಟ್ರೀಯ ಮಟ್ಟದ ದೊಡ್ಡ ಮಾಫಿಯಾ ಸಂಪರ್ಕ ಇದರಲ್ಲಿ ಇದೆ. ರಾಜ್ಯಪಾಲರಿಗೆ ನಾವು ದೂರು ಕೊಡುತ್ತೇವೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಇಂತಹ ಕೃತ್ಯ ನಡೆದಿದೆ.

ಆದ್ದರಿಂದ ಡ್ರಗ್ಸ್ ಮಾಫಿಯಾವನ್ನು ಸಿದ್ದರಾಮಯ್ಯ ಅವರೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು. ಮೈಸೂರಿನ ಡ್ರಗ್ಸ್ ಮಾಫಿಯಾ ಸಿಕ್ಕಿ ಬಿದ್ದ ಮೇಲೆ ಏನಾಗಿದೆ, ಮುಂದುವರೆದ ತನಿಖೆ ಎಲ್ಲಿ ತನಕ ಬಂದಿದೆ ಎಂಬ ಸಮಗ್ರ ಮಾಹಿತಿ ಜನರಿಗೆ ತಿಳಿದಿಲ್ಲ. ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಈ ಪ್ರಕರಣದ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

6 mins ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

12 mins ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

3 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

3 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

3 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

4 hours ago