ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ವಿಲನ್ ಲುಕ್ಕಿನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಎರಡು ರೀತಿಯ ಫೋಟೋಶೂಟ್ ಮಾಡಿಸಿ ತಮ್ಮ ಅಧಿಕೃತ ಇನ್ಸ್ಸ್ಟಾಗ್ರಾಮ್ ಖಾತೆಗೆ ಶೇರ್ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು ನಿಷೇಧ. ಈ ಎಲ್ಲಾ ವಿಷಯಗಳು ಗೊತ್ತಿದ್ದರೂ ರಜತ್ ಶೋಕಿಗಾಗಿ ರೀಲ್ಸ್ ಮಾಡಿ ಫೋಟೊಶೂಟ್ ಮಾಡಿಸಿದ್ದಾರೆ.
ಈ ಹಿಂದೆ ಶೂಟಿಂಗ್ ಸೆಟ್ನಲ್ಲಿ ಮಚ್ಚು ಹಿಡಿದು ಫೋಟೋಶೂಟ್ ಮಾಡಿಸಿಕೊಂಡು ಜೈಲಿಗೆ ಹೋಗಿ ಬೇಲ್ ಮೇಲೆ ಹೊರಬಂದಿದ್ದರು. ಆದರೂ ಬುದ್ಧಿ ಕಲಿಯದ ರಜತ್ ಈಗ ಮತ್ತೊಮ್ಮೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…