ಮೈಸೂರು: ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.
ಮೈಸೂರಿನ ಶಿವರಾಂಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಮಾಡಿರುವ ರಾಮನ ದೇವಾಲಯ ಇದಾಗಿದ್ದು, ರಾಮನವಮಿಯ ಅಂಗವಾಗಿ ಇಂದು ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ.
ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮಂತನಿಗೆ ಇಂದು ರಾಮನವಮಿಯ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿದ್ದು, ಇಂದು ಮುಂಜಾನೆಯಿಂದಲೇ ರಾಮನಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಪುನಸ್ಕಾರ ನೆರವೇರಿಸಲಾಗಿದೆ.
ರಾಮನವಮಿಯ ಅಂಗವಾಗಿ ದೇವಾಲಯಕ್ಕೆ ಬಂದ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ರಾಮನ ದರ್ಶನ ಪಡೆದು ಪುನೀತರಾದರು. ಜೊತೆಗೆ ರಾಮನ ಭಜನೆ ಹಾಡುವ ಮೂಲಕ ರಾಮನನ್ನು ಮನದಲ್ಲೇ ನೆನೆದು, ಮರ್ಯಾದ ಪುರುಷೋತ್ತಮನ ಜಪ ಮಾಡಿದರು.
ದೇವಾಲಯಕ್ಕೆ ಬಂದ ಎಲ್ಲಾ ಸಾರ್ವಜನಿಕರಿಗೂ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಲಾಯಿತು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…