ಮೈಸೂರು ನಗರ

ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ: ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಮೈಸೂರಿನ ಶಿವರಾಂಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಮಾಡಿರುವ ರಾಮನ ದೇವಾಲಯ ಇದಾಗಿದ್ದು, ರಾಮನವಮಿಯ ಅಂಗವಾಗಿ ಇಂದು ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ.

ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮಂತನಿಗೆ ಇಂದು ರಾಮನವಮಿಯ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿದ್ದು, ಇಂದು ಮುಂಜಾನೆಯಿಂದಲೇ ರಾಮನಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಪುನಸ್ಕಾರ ನೆರವೇರಿಸಲಾಗಿದೆ.

ರಾಮನವಮಿಯ ಅಂಗವಾಗಿ ದೇವಾಲಯಕ್ಕೆ ಬಂದ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ರಾಮನ ದರ್ಶನ ಪಡೆದು  ಪುನೀತರಾದರು. ಜೊತೆಗೆ ರಾಮನ ಭಜನೆ ಹಾಡುವ ಮೂಲಕ ರಾಮನನ್ನು ಮನದಲ್ಲೇ ನೆನೆದು, ಮರ್ಯಾದ ಪುರುಷೋತ್ತಮನ ಜಪ ಮಾಡಿದರು.

ದೇವಾಲಯಕ್ಕೆ ಬಂದ ಎಲ್ಲಾ ಸಾರ್ವಜನಿಕರಿಗೂ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಲಾಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

28 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

1 hour ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

1 hour ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago