Mysore
28
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬವನ್ನು ಆಚರಣೆ ಮಾಡಿದರು.

ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆ ವೇಳೆ ಶಾಸಕರುಗಳಾದ ತನ್ವೀರ್‌ ಸೇಠ್‌, ಹರೀಶ್‌ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸಹ ಭಾಗಿಯಾಗಿದ್ದರು.

ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಇಂದು ಮಂಜಾನ್‌ ಮಸೀದಿಗಳಿಗೆ ತೆರಳಿದ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿ ಉಪವಾಸ ಅಂತ್ಯಗೊಳಿಸಿದರು.

ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ವಯಸ್ಸಿನ ಅಂತರ ಮರೆತು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್‌ ಶುಭಾಶಯ ವಿನಿಮಯ ಮಾಡಿಕೊಂಡರು.

 

Tags:
error: Content is protected !!