ಮೈಸೂರು ನಗರ

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.

ರಥಸಪ್ತಮಿ ಸೂರ್ಯ ನಾರಾಯಣನಿಗೆ ಬಹಳ ವಿಶೇಷ. ಸೂರ್ಯದೇವ ಉತ್ತರಾಯಣದಿಂದ ದಕ್ಷಿಣಾಯಣಕ್ಕೆ ಪಥ ಬದಲಿಸುತ್ತಾನೆ. ಹೀಗಾಗಿ ಸರ್ವರಿಗೂ ಮಂಗಳ ಉಂಟು ಮಾಡಲಿ ಎಂದು ಲೋಕ ಕಲ್ಯಾಣಕ್ಕಾಗಿ ರಥಸಪ್ತಮಿ ಆಚರಿಸಲಾಗುತ್ತದೆ. ಇದು ಬಹಳ ಹಿಂದಿನಿಂದ ನಡೆದುಕೊಂಡು ಬಂದಿರುವ ಆಚರಣೆ. ಅರಮನೆ ಆವರಣದಲ್ಲಿ ಇರುವ ದೇವಾಲಯಗಳು ಬಹಳ ವಿಶೇಷವಾದವು. ಆಗಿನ ಕಾಲದಲ್ಲಿ ರಾಜರು ನಡೆಸುತ್ತಿದ್ದರು. ಈಗ ಸರ್ಕಾರವೇ ಮಾಡುತ್ತಿದೆ.

2016ರ ಬಳಿಕ ಈ ವರ್ಷ ಭಾನುವಾರ ರಥಸಪ್ತಮಿ ಇರುವುದು ವಿಶೇಷ. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ಪ್ರಾಧಿಕಾರ ಹಾಗೂ ಅರಮನೆ ಮಂಡಳಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಅರಮನೆ ಆವರಣದಲ್ಲಿ ನಿಲ್ಲಿಸಿದ್ದ 8 ರಥಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಕಲ ಜೀವರಾಶಿಗೂ ತನ್ನ ಬೆಳಕಿನ ಮೂಲಕ ಚೈತನ್ಯ ನೀಡುವ ಸೂರ್ಯನನ್ನು ಆರಾಧಿಸಲಾಯಿತು. ಮುಂಜಾನೆ ಅರಮನೆಯ ಮುಖ್ಯದ್ವಾರದ ಮುಂಭಾಗ ರಥಗಳನ್ನು ನಿಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀ ಭುವನೇಶ್ವರಿ, ಶ್ರೀ ತ್ರಿನೇಶ್ವರ ಸ್ವಾಮಿ, ಶ್ರೀ ಲಕ್ಷ್ಮೀರಮಣಸ್ವಾಮಿ, ಶ್ರೀ ಮಹಾಲಕ್ಷ್ಮೀದೇವಿ, ಶ್ರೀ ಪ್ರಸನ್ನ ಕೃಷ್ಣ, ಶ್ರೀ ವೇದವರಹಸ್ವಾಮಿ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ಹಾಗೂ ಶ್ರೀ ಗಾಯಿತ್ರಿ ಅಮ್ಮನವರ ಉತ್ಸವ ಮೂರ್ತಿಗಳ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಗರದ ವಿವಿಧ ಬಡಾವಣೆಗಳಿಂದ ನೂರಾರು ಮಂದಿ ಅರಮನೆಗೆ ಆಗಮಿಸಿ ದೇವರ ದರ್ಶನ ಪಡೆದರು. ಒಂದೇ ಕಡೆ 8 ದೇವರುಗಳನ್ನು ಕಂಡು ಭಕ್ತರು ಪುಳಕಿತರಾದರು.

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಆಂಜನೇಯಸ್ವಾಮಿ ದರ್ಶನ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago