ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಮೂರೇ ದಿನಕ್ಕೆ ಚಾಮುಂಡಿಬೆಟ್ಟ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಯಿತು.
ಶನಿವಾರವಷ್ಟೇ ದಸರಾ ಹಬ್ಬ ಸಂಪನ್ನಗೊಂಡಿದ್ದು, ಬೇರೆ ಬೇರೆ ರಾಜ್ಯ ಹಾಗೂ ದೇಶಗಳಿಂದ ಆಗಮಿಸಿದ್ದ ಪ್ರವಾಸಿಗರು ದಸರಾವನ್ನು ಕಣ್ತುಂಬಿಕೊಂಡು ಹಿಂದಿರುಗಿದ್ದಾರೆ.
ಈ ಮಧ್ಯೆ ಇಂದು ನಾಡದೇವತೆ ಚಾಮುಂಡೇಶ್ವರಿ ತಾಯಿ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಅದ್ಧೂರಿಯಾಗಿ ರಥೋತ್ಸವ ನೆರವೇರಿದೆ.
ಇಂದು ಬೆಳಿಗ್ಗೆಯಿಂದಲೇ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿದ್ದು, ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ನಂತರ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಈ ವೇಳೆ ನೆರೆದಿದ್ದ ಸಾರ್ವಜನಿಕರು ರಥಕ್ಕೆ ಹಣ್ಣು ಎಸೆದು ಚಾಮುಂಡೇಶ್ವರಿಗೆ ಜೈಕಾರ ಹಾಕಿ ತಾಯಿಯ ದರ್ಶನ ಪಡೆದು ಪುನೀತರಾದರು.
ಆ ಬಳಿಕ ಚಾಮುಂಡೇಶ್ವರಿ ತಾಯಿಯ ಮೂಲ ಮೂರ್ತಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಯಿತು.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…