ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಮೂರೇ ದಿನಕ್ಕೆ ಚಾಮುಂಡಿಬೆಟ್ಟ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಯಿತು.
ಶನಿವಾರವಷ್ಟೇ ದಸರಾ ಹಬ್ಬ ಸಂಪನ್ನಗೊಂಡಿದ್ದು, ಬೇರೆ ಬೇರೆ ರಾಜ್ಯ ಹಾಗೂ ದೇಶಗಳಿಂದ ಆಗಮಿಸಿದ್ದ ಪ್ರವಾಸಿಗರು ದಸರಾವನ್ನು ಕಣ್ತುಂಬಿಕೊಂಡು ಹಿಂದಿರುಗಿದ್ದಾರೆ.
ಈ ಮಧ್ಯೆ ಇಂದು ನಾಡದೇವತೆ ಚಾಮುಂಡೇಶ್ವರಿ ತಾಯಿ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಅದ್ಧೂರಿಯಾಗಿ ರಥೋತ್ಸವ ನೆರವೇರಿದೆ.
ಇಂದು ಬೆಳಿಗ್ಗೆಯಿಂದಲೇ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿದ್ದು, ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ನಂತರ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಈ ವೇಳೆ ನೆರೆದಿದ್ದ ಸಾರ್ವಜನಿಕರು ರಥಕ್ಕೆ ಹಣ್ಣು ಎಸೆದು ಚಾಮುಂಡೇಶ್ವರಿಗೆ ಜೈಕಾರ ಹಾಕಿ ತಾಯಿಯ ದರ್ಶನ ಪಡೆದು ಪುನೀತರಾದರು.
ಆ ಬಳಿಕ ಚಾಮುಂಡೇಶ್ವರಿ ತಾಯಿಯ ಮೂಲ ಮೂರ್ತಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಯಿತು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…