ಬಿಜೆಪಿ ಆರೋಪ ಸತ್ಯಕ್ಕೆ ದೂರ: ಡಾ.ಪುಷ್ಪಾ ಅಮರನಾಥ್‌

ಮೈಸೂರು: ಕಾಂಗ್ರೆಸ್‌ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅನ್ನಭಾಗ್ಯ ಹೊರೆ ಕಡಿಮೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು(ನ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರ ಆರೋಪಗಳು ಸುಳ್ಳಾಗಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಇನ್ನು 10 ಲಕ್ಷ ಜನ ಬಿಪಿಎಲ್‌ ಕಾರ್ಡ್‌ ಜನರಿದ್ದರು ಸಹ ಅವರಿಗೆ ಕಾರ್ಡ್‌ ಸೌಲಭ್ಯವನ್ನು ನೀಡಲು ಸಿದ್ದವಿದೆ ಎಂದರು.

ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿ ಬಾರಿಯೂ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ತಕ್ಷಣ ಬಸವೇಶ್ವರ ಜಯಂತಿ ದಿನದಂದೇ ಅನ್ನಭಾಗ್ಯವನ್ನು ಘೋಷಿಸಿ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಹೀಗಿರುವಾಗ ಸರ್ಕಾರದ ವಿರುದ್ಧ ವಿಪಕ್ಷಗಳು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಮೈಸೂರು ಭಾಗದ 8 ಜಿಲ್ಲೆಗಳಲ್ಲಿ ಉಸ್ತುವಾರಿ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಜಿಲ್ಲೆಯಲ್ಲಿ ಒಟ್ಟು 6,91,370 ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿದ್ದಾರೆ. ಆದರೆ ಅವುಗಳಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಒಂದಷ್ಟು ಪರಿಷ್ಕರಣೆ ಮಾಡಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದಾಗ ನಮ್ಮ ಜಿಲ್ಲೆಯಲ್ಲಿ 4,221 ಕಾರ್ಡ್‌ಗಳು ಮಾತ್ರ ರದ್ದಾಗಿವೆ ಎಂದು ತಿಳಿದು ಬಂದಿದೆ ಎಂದರು.

ರದ್ದಾಗಿರುವ ಕಾರ್ಡ್‌ಗಳಲ್ಲಿ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗಿದ್ದರೆ ಇನ್ನೊಮ್ಮೆ ಅರ್ಜಿ ಹಾಕಿ ಪಡೆಯಬಹುದಾಗಿದೆ. ಒಂದು ವೇಳೆ ಮಾನದಂಡ ವ್ಯಾಪ್ತಿಯಲ್ಲಿ ಲೋಪದೋಷಗಳು ಉಂಟಾಗಿ ಕಾರ್ಡ್‌ಗಳನ್ನು ಕೈ ಬಿಟ್ಟಿದ್ದರೆ ಮತ್ತೆ ಸೇರಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ. ಹೀಗಾಗಿ ಯಾರೂ ಸಹ ಬಿಪಿಎಲ್‌ ಕಾರ್ಡ್‌ ರದ್ದಾಗಿರುವ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

2 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

3 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

4 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

4 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

4 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

5 hours ago