ಬಿಜೆಪಿ ಆರೋಪ ಸತ್ಯಕ್ಕೆ ದೂರ: ಡಾ.ಪುಷ್ಪಾ ಅಮರನಾಥ್‌

ಮೈಸೂರು: ಕಾಂಗ್ರೆಸ್‌ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅನ್ನಭಾಗ್ಯ ಹೊರೆ ಕಡಿಮೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು(ನ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರ ಆರೋಪಗಳು ಸುಳ್ಳಾಗಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಇನ್ನು 10 ಲಕ್ಷ ಜನ ಬಿಪಿಎಲ್‌ ಕಾರ್ಡ್‌ ಜನರಿದ್ದರು ಸಹ ಅವರಿಗೆ ಕಾರ್ಡ್‌ ಸೌಲಭ್ಯವನ್ನು ನೀಡಲು ಸಿದ್ದವಿದೆ ಎಂದರು.

ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿ ಬಾರಿಯೂ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ತಕ್ಷಣ ಬಸವೇಶ್ವರ ಜಯಂತಿ ದಿನದಂದೇ ಅನ್ನಭಾಗ್ಯವನ್ನು ಘೋಷಿಸಿ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಹೀಗಿರುವಾಗ ಸರ್ಕಾರದ ವಿರುದ್ಧ ವಿಪಕ್ಷಗಳು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಮೈಸೂರು ಭಾಗದ 8 ಜಿಲ್ಲೆಗಳಲ್ಲಿ ಉಸ್ತುವಾರಿ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಜಿಲ್ಲೆಯಲ್ಲಿ ಒಟ್ಟು 6,91,370 ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿದ್ದಾರೆ. ಆದರೆ ಅವುಗಳಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಒಂದಷ್ಟು ಪರಿಷ್ಕರಣೆ ಮಾಡಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದಾಗ ನಮ್ಮ ಜಿಲ್ಲೆಯಲ್ಲಿ 4,221 ಕಾರ್ಡ್‌ಗಳು ಮಾತ್ರ ರದ್ದಾಗಿವೆ ಎಂದು ತಿಳಿದು ಬಂದಿದೆ ಎಂದರು.

ರದ್ದಾಗಿರುವ ಕಾರ್ಡ್‌ಗಳಲ್ಲಿ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗಿದ್ದರೆ ಇನ್ನೊಮ್ಮೆ ಅರ್ಜಿ ಹಾಕಿ ಪಡೆಯಬಹುದಾಗಿದೆ. ಒಂದು ವೇಳೆ ಮಾನದಂಡ ವ್ಯಾಪ್ತಿಯಲ್ಲಿ ಲೋಪದೋಷಗಳು ಉಂಟಾಗಿ ಕಾರ್ಡ್‌ಗಳನ್ನು ಕೈ ಬಿಟ್ಟಿದ್ದರೆ ಮತ್ತೆ ಸೇರಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ. ಹೀಗಾಗಿ ಯಾರೂ ಸಹ ಬಿಪಿಎಲ್‌ ಕಾರ್ಡ್‌ ರದ್ದಾಗಿರುವ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

7 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago