indira canteen
ಮೈಸೂರು: 18 ವರ್ಷಗಳ ಬಳಿಕ ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.
ಮೈಸೂರಿನಲ್ಲಿರುವ ಒಟ್ಟು 16 ಇಂದಿರಾ ಕ್ಯಾಂಟೀನ್ಗಳಲ್ಲೂ ಹೋಳಿಗೆ ಊಟ ನಡೆಯುತ್ತಿದ್ದು, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜು ಬಸಪ್ಪ, ಸುಬ್ಬಣ್ಣ, ಸಮಾಜ ಸೇವಕಿ ಖುಷಿ, ವಿನು ಸೇರಿದಂತೆ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಯಿತು.
ಹೋಳಿಗೆ ಊಟ ಸವಿಯಲು ಕ್ಯಾಂಟೀನ್ ಬಳಿ ಜನರು ಮುಗಿಬಿದ್ದಿದ್ದು, ನಗರದ ಕೆ.ಆರ್.ಆಸ್ಪತ್ರೆ ಮುಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ನಲ್ಲಿ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು.
ಇದನ್ನೂ ಓದಿ:- ಐಪಿಎಲ್ ಟ್ರೋಫಿ ಹೊತ್ತು ಬೆಂಗಳೂರಿಗೆ ಬರುತ್ತಿರುವ ಆರ್ಸಿಬಿ ಚಾಂಪಿಯನ್ಸ್
ಬಳಿಕ ಉಳಿದ ಎಲ್ಲಾ ಕ್ಯಾಂಟೀನ್ಗಳಲ್ಲೂ ಅಭಿಮಾನಿಗಳು ಹೋಳಿಗೆ ಊಟ ಕೊಡಲು ಮುಂದಾಗಿದ್ದು, ಸಾರ್ವಜನಿಕರು ಹೋಳಿಗೆ ಊಟ ಸವಿದು ಸಂತಸ ವ್ಯಕ್ತಪಡಿಸಿದ್ದಾರೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…