ಮೈಸೂರು ನಗರ

ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ

ಮೈಸೂರು: 18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.

ಮೈಸೂರಿನಲ್ಲಿರುವ ಒಟ್ಟು 16 ಇಂದಿರಾ ಕ್ಯಾಂಟೀನ್‌ಗಳಲ್ಲೂ ಹೋಳಿಗೆ ಊಟ ನಡೆಯುತ್ತಿದ್ದು, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜು ಬಸಪ್ಪ, ಸುಬ್ಬಣ್ಣ, ಸಮಾಜ ಸೇವಕಿ ಖುಷಿ, ವಿನು ಸೇರಿದಂತೆ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಯಿತು.

ಹೋಳಿಗೆ ಊಟ ಸವಿಯಲು ಕ್ಯಾಂಟೀನ್‌ ಬಳಿ ಜನರು ಮುಗಿಬಿದ್ದಿದ್ದು, ನಗರದ ಕೆ.ಆರ್.ಆಸ್ಪತ್ರೆ ಮುಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು.

ಇದನ್ನೂ ಓದಿ:- ಐಪಿಎಲ್‌ ಟ್ರೋಫಿ ಹೊತ್ತು ಬೆಂಗಳೂರಿಗೆ ಬರುತ್ತಿರುವ ಆರ್‌ಸಿಬಿ ಚಾಂಪಿಯನ್ಸ್‌ 

ಬಳಿಕ ಉಳಿದ ಎಲ್ಲಾ ಕ್ಯಾಂಟೀನ್‌ಗಳಲ್ಲೂ ಅಭಿಮಾನಿಗಳು ಹೋಳಿಗೆ ಊಟ ಕೊಡಲು ಮುಂದಾಗಿದ್ದು, ಸಾರ್ವಜನಿಕರು ಹೋಳಿಗೆ ಊಟ ಸವಿದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

27 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago