ಮೈಸೂರು ನಗರ

ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ

ಮೈಸೂರು: 18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.

ಮೈಸೂರಿನಲ್ಲಿರುವ ಒಟ್ಟು 16 ಇಂದಿರಾ ಕ್ಯಾಂಟೀನ್‌ಗಳಲ್ಲೂ ಹೋಳಿಗೆ ಊಟ ನಡೆಯುತ್ತಿದ್ದು, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜು ಬಸಪ್ಪ, ಸುಬ್ಬಣ್ಣ, ಸಮಾಜ ಸೇವಕಿ ಖುಷಿ, ವಿನು ಸೇರಿದಂತೆ ಹಲವಾರು ಅಭಿಮಾನಿಗಳ ಸಮ್ಮುಖದಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಯಿತು.

ಹೋಳಿಗೆ ಊಟ ಸವಿಯಲು ಕ್ಯಾಂಟೀನ್‌ ಬಳಿ ಜನರು ಮುಗಿಬಿದ್ದಿದ್ದು, ನಗರದ ಕೆ.ಆರ್.ಆಸ್ಪತ್ರೆ ಮುಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು.

ಇದನ್ನೂ ಓದಿ:- ಐಪಿಎಲ್‌ ಟ್ರೋಫಿ ಹೊತ್ತು ಬೆಂಗಳೂರಿಗೆ ಬರುತ್ತಿರುವ ಆರ್‌ಸಿಬಿ ಚಾಂಪಿಯನ್ಸ್‌ 

ಬಳಿಕ ಉಳಿದ ಎಲ್ಲಾ ಕ್ಯಾಂಟೀನ್‌ಗಳಲ್ಲೂ ಅಭಿಮಾನಿಗಳು ಹೋಳಿಗೆ ಊಟ ಕೊಡಲು ಮುಂದಾಗಿದ್ದು, ಸಾರ್ವಜನಿಕರು ಹೋಳಿಗೆ ಊಟ ಸವಿದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

10 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

12 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

13 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

13 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

14 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

15 hours ago