cm siddaramaiah
ಮೈಸೂರು: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕೋರ್ಟ್ಗೆ ಹೋಗಿದ್ದಾರೆ. ಕೋರ್ಟ್ ಅದನ್ನು ನೋಡಿಕೊಳ್ಳುತ್ತೆ. ಏನಾಗುತ್ತೆ ಅಂತ ಪಿ. ಐ.ಎಲ್ ಸಲ್ಲಿಸಿರುವವರನ್ನು ಕೇಳಿ. ದಸರಾ ಸಾಂಸ್ಕೃತಿಕವಾಗಿ ನಡೆಯುತ್ತಿರುವ ಕಾರ್ಯಕ್ರಮ. ದಸರಾ ಎಲ್ಲರ ಹಬ್ಬ ಒಂದು, ಜಾತಿ ಧರ್ಮಕ್ಕೆ ಸೇರಿದ ಹಬ್ಬ ಅಲ್ಲ. ಮುಸ್ಲಿಂ, ಕ್ರಿಸ್ಟಿಯನ್ ಎಲ್ಲರೂ ಬರ್ತಾರೆ. ಇದನ್ನು ಬೇರೆ ರೀತಿ ರಾಜಕೀಯವಾಗಿ ವಿರೋಧ ಮಾಡ್ತಾರೆ. ವಿರೋಧ ಮಾಡೋರನ್ನ ಈ ಬಗ್ಗೆ ಕೇಳಿ ಎಂದು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಗಡಿಪಾರಿಗೆ ಕೆಲ ಸಂಘಟನೆಗಳು ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ನಾನೇನು ಸೂಚನೆ ಕೊಡಲ್ಲ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…