Relief for CM's wife Parvati in Supreme Court: Kai activists celebrate in Mysore
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ ಹಿಡಿದು ಸಂಭ್ರಮಿಸಿದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್, ನಗರಾಧ್ಯಕ್ಷ ರಘು ಸೇರಿದಂತೆ ಅನೇಕ ಕೈ ಕಾರ್ಯಕರ್ತರು ಭಾಗಿಯಾಗಿ ಪರಸ್ಪರ ಸಿಹಿ ತಿನ್ನಿಸಿ ಖುಷಿಪಟ್ಟರು.
ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಇಡಿಯು ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ಆರ್ಎಸ್ಎಸ್ ಕೂಲಿಕಾರರಾಗಿ ಇಡಿ ಕೆಲಸ ಮಾಡುತ್ತಿದೆ. ಮುಡಾ ಸೈಟ್ನಲ್ಲಿ ಮನಿ ಲಾಡರಿಂಗ್ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದ ಅವರು, ದೂರುದಾರ ಸ್ನೇಹ ಮಯಿ ಕೃಷ್ಣ ಒಬ್ಬ ಕ್ರಿಮಿನಲ್. ಅವನು ಸಾಯುವವರೆಗೂ ಇದೇ ರೀತಿ ಹೇಳಿಕೊಂಡು ತಿರುಗಬೇಕು. ಹೈಕೋರ್ಟ್ ಆದೇಶ ಬಹಳ ಸ್ಪಷ್ಟವಾಗಿದೆ. ಲೋಕಾಯುಕ್ತ ತನಿಖೆ ಮಾಡುವಾಗ ಇಡಿ ತನಿಖೆ ಮಾಡುವ ಅವಶ್ಯಕತೆ ಇಲ್ಲ. ಆದರೂ ಸುಪ್ರೀಂಕೋರ್ಟ್ಗೆ ಅಪೀಲ್ ಮಾಡಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಇಡಿಗೆ ಚೀಮಾರಿ ಹಾಕಿದೆ. ಇಡಿಯನ್ನು ಕ್ಲೋಸ್ ಮಾಡಿಸಬೇಕು. ಬಿಜೆಪಿಯವರು ಇಡಿ, ಸಿಬಿಐ ಹಾಗೂ ಎನ್ಐಎಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದನ್ನು ಬಿಡಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…