Relief for CM's wife Parvati in Supreme Court: Kai activists celebrate in Mysore
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ ಹಿಡಿದು ಸಂಭ್ರಮಿಸಿದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯ ಕುಮಾರ್, ನಗರಾಧ್ಯಕ್ಷ ರಘು ಸೇರಿದಂತೆ ಅನೇಕ ಕೈ ಕಾರ್ಯಕರ್ತರು ಭಾಗಿಯಾಗಿ ಪರಸ್ಪರ ಸಿಹಿ ತಿನ್ನಿಸಿ ಖುಷಿಪಟ್ಟರು.
ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಇಡಿಯು ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ಆರ್ಎಸ್ಎಸ್ ಕೂಲಿಕಾರರಾಗಿ ಇಡಿ ಕೆಲಸ ಮಾಡುತ್ತಿದೆ. ಮುಡಾ ಸೈಟ್ನಲ್ಲಿ ಮನಿ ಲಾಡರಿಂಗ್ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದ ಅವರು, ದೂರುದಾರ ಸ್ನೇಹ ಮಯಿ ಕೃಷ್ಣ ಒಬ್ಬ ಕ್ರಿಮಿನಲ್. ಅವನು ಸಾಯುವವರೆಗೂ ಇದೇ ರೀತಿ ಹೇಳಿಕೊಂಡು ತಿರುಗಬೇಕು. ಹೈಕೋರ್ಟ್ ಆದೇಶ ಬಹಳ ಸ್ಪಷ್ಟವಾಗಿದೆ. ಲೋಕಾಯುಕ್ತ ತನಿಖೆ ಮಾಡುವಾಗ ಇಡಿ ತನಿಖೆ ಮಾಡುವ ಅವಶ್ಯಕತೆ ಇಲ್ಲ. ಆದರೂ ಸುಪ್ರೀಂಕೋರ್ಟ್ಗೆ ಅಪೀಲ್ ಮಾಡಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಇಡಿಗೆ ಚೀಮಾರಿ ಹಾಕಿದೆ. ಇಡಿಯನ್ನು ಕ್ಲೋಸ್ ಮಾಡಿಸಬೇಕು. ಬಿಜೆಪಿಯವರು ಇಡಿ, ಸಿಬಿಐ ಹಾಗೂ ಎನ್ಐಎಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದನ್ನು ಬಿಡಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…